‘ಭೂ ಹಗರಣದ ಕುರಿತು ನಾವು 2021ರ ಜೂನ್ನಿಂದ ಹೇಳುತ್ತಲೇ ಬಂದಿದ್ದೇವೆ. ಈಗ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 40 ಮಂದಿಯ ಪಟ್ಟಿಯನ್ನು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವೇ ಬಿಡುಗಡೆ ಮಾಡಿದೆ. ಜನರು ಬಹಳ ನಂಬಿಕೆಯಿಂದ ದೇಣಿಗೆ ನೀಡಿದ್ದರು. ಆದರೆ, ಈ ದೇಣಿಗೆಯನ್ನೇ ಬಿಜೆಪಿ ಕಳ್ಳತನ ಮಾಡಿದೆ’ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೆತ್ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.