ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ಡೊಟಸರಾ ಅವರು ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಅಧಿಕಾರಿ ಮತ್ತು ಶ್ರೀಗಂಗಾನಗರದ ಜಿಲ್ಲಾ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಸುರೇಂದ್ರ ಪಾಲ್ ಸಿಂಗ್ ಅವರನ್ನು ಸಚಿವರಾಗಿ ನೇಮಿಸಿರುವುದು ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ; ವಿಶೇಷವಾಗಿ ಕಲಂ 32ರಲ್ಲಿ, ಚುನಾವಣೆಗಳನ್ನು ಘೋಷಿಸಿದ ಬಳಿಕ ತಾತ್ಕಾಲಿಕ ನೇಮಕಾತಿಗಳನ್ನು ಸರ್ಕಾರ ಮಾಡಬಾರದು ಎಂದು ಹೇಳಲಾಗಿದೆ. ಇಂತಹ ನೇಮಕವು ಮತದಾರರ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.