‘ಜಾರಿ ನಿರ್ದೇಶನಾಲಯ ಸೇರಿದಂತೆ ತನಿಖಾ ಸಂಸ್ಥೆಗಳ ದುರ್ಬಳಕೆ ಹಾಗೂ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮುಂದುವರಿಸುತ್ತೇವೆ. ಸಂಸದರನ್ನು ಸದನದಿಂದ ಅಮಾನತು ಮಾಡಿದ್ದು ಸರಿಯಲ್ಲ. ತಕ್ಷಣ ಆದೇಶ ಹಿಂಪಡೆ ಯಬೇಕು’ ಎಂದು ಖರ್ಗೆ ಅವರು ಒತ್ತಾಯಿಸಿದರು.ತನಿಖಾ ಸಂಸ್ಥೆಗಳನ್ನು ಸರ್ಕಾರ ಬಳಸಿಕೊಳ್ಳುತ್ತಿರುವ ರೀತಿಗೆ ಆಕ್ಷೇಪ ವ್ಯಕ್ತಪಡಿಸಿದ ಚೌಧರಿ ಅವರು, ‘ಪ್ರತಿಪಕ್ಷಮುಕ್ತ ಭಾರತ ನಿರ್ಮಿಸುವುದು ಸರ್ಕಾರದ ಉದ್ದೇಶ ಎಂಬಂತೆ ತೋರುತ್ತಿದೆ’ ಎಂದು ಆರೋಪಿಸಿದರು.