<p class="title"><strong>ನವದೆಹಲಿ: </strong>ದೇಶದಲ್ಲಿ ಆರು ವಿಮಾನನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದ್ದು, ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಕರಣದ ತನಿಖೆಗೆ ಆಗ್ರಹಿಸಿದೆ.</p>.<p class="title">ಆದರೆ, ಕಾಂಗ್ರೆಸ್ ಪಕ್ಷದ ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಮೋದಿ ಅವರ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆಗೆ ಒತ್ತು ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ.</p>.<p class="title">ರಾಜ್ಯಸಭೆಯಲ್ಲಿ ಮಂಗಳವಾರ‘ವೈಮಾನಿಕ (ತಿದ್ದುಪಡಿ) ಮಸೂದೆ 2020’ ಕುರಿತ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ನ ಕೆ.ಸಿ.ವೇಣುಗೋಪಾಲ್ ಅವರು, ‘ಅಭಿವೃದ್ಧಿ ಹೆಸರಿನಲ್ಲಿ ವಿಮಾನನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಮೂಲಕ ಸರ್ಕಾರ ಏಕಸ್ವಾಮ್ಯಕ್ಕೆ ಬೆಂಬಲ ನೀಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಖಾಸಗೀಕರಣದ ಹಿಂದೆ ಏಕಸ್ವಾಮ್ಯದ ಯತ್ನವಿದೆ. ಭವಿಷ್ಯದಲ್ಲಿ ಎಲ್ಲ ವಿಮಾನನಿಲ್ದಾಣಗಳ ಮಾಲೀಕತ್ವ ಒಂದೇ ಕಂಪನಿಯದ್ದಾಗಿರುತ್ತದೆ. ಇದು ಹೇಗಾಗುತ್ತದೆ? ಇದು ನಿಯಮಗಳ ಸ್ಪಷ್ಟ ಉಲ್ಲಂಘನೆ. ಭ್ರಷ್ಟಾಚಾರ ನಡೆದಿರುವ ಸಾಧ್ಯತೆಯೂ ಇದೆ. ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>ಖಾಸಗಿ ಸಂಸ್ಥೆಯೊಂದಕ್ಕೆ ನೆರವಾಗುವಂತೆ ಸರ್ಕಾರ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದೆ. ಅದಾನಿ ಸಮೂಹ ಇದುವರೆಗೂ ದೇಶದಲ್ಲಿ ಅಹಮದಾಬಾದ್, ಲಖನೌ, ಬೆಂಗಳೂರು, ಜೈಪುರ, ಗುವಾಹಟಿ ಮತ್ತು ತಿರುವನಂತಪುರದ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಬಿಡ್ ಗೆದ್ದುಕೊಂಡಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ದೇಶದಲ್ಲಿ ಆರು ವಿಮಾನನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದ್ದು, ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಕರಣದ ತನಿಖೆಗೆ ಆಗ್ರಹಿಸಿದೆ.</p>.<p class="title">ಆದರೆ, ಕಾಂಗ್ರೆಸ್ ಪಕ್ಷದ ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಮೋದಿ ಅವರ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆಗೆ ಒತ್ತು ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ.</p>.<p class="title">ರಾಜ್ಯಸಭೆಯಲ್ಲಿ ಮಂಗಳವಾರ‘ವೈಮಾನಿಕ (ತಿದ್ದುಪಡಿ) ಮಸೂದೆ 2020’ ಕುರಿತ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ನ ಕೆ.ಸಿ.ವೇಣುಗೋಪಾಲ್ ಅವರು, ‘ಅಭಿವೃದ್ಧಿ ಹೆಸರಿನಲ್ಲಿ ವಿಮಾನನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಮೂಲಕ ಸರ್ಕಾರ ಏಕಸ್ವಾಮ್ಯಕ್ಕೆ ಬೆಂಬಲ ನೀಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಖಾಸಗೀಕರಣದ ಹಿಂದೆ ಏಕಸ್ವಾಮ್ಯದ ಯತ್ನವಿದೆ. ಭವಿಷ್ಯದಲ್ಲಿ ಎಲ್ಲ ವಿಮಾನನಿಲ್ದಾಣಗಳ ಮಾಲೀಕತ್ವ ಒಂದೇ ಕಂಪನಿಯದ್ದಾಗಿರುತ್ತದೆ. ಇದು ಹೇಗಾಗುತ್ತದೆ? ಇದು ನಿಯಮಗಳ ಸ್ಪಷ್ಟ ಉಲ್ಲಂಘನೆ. ಭ್ರಷ್ಟಾಚಾರ ನಡೆದಿರುವ ಸಾಧ್ಯತೆಯೂ ಇದೆ. ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>ಖಾಸಗಿ ಸಂಸ್ಥೆಯೊಂದಕ್ಕೆ ನೆರವಾಗುವಂತೆ ಸರ್ಕಾರ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದೆ. ಅದಾನಿ ಸಮೂಹ ಇದುವರೆಗೂ ದೇಶದಲ್ಲಿ ಅಹಮದಾಬಾದ್, ಲಖನೌ, ಬೆಂಗಳೂರು, ಜೈಪುರ, ಗುವಾಹಟಿ ಮತ್ತು ತಿರುವನಂತಪುರದ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಬಿಡ್ ಗೆದ್ದುಕೊಂಡಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>