ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕನಾಥ ಶಿಂಧೆ ಬೆಂಬಲಿಗರ ಪತ್ರದಲ್ಲೇ ತಪ್ಪಿದೆ: ಕಾಂಗ್ರೆಸ್ ಪ್ರತಿಕ್ರಿಯೆ

Last Updated 24 ಜೂನ್ 2022, 7:40 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಶುಕ್ರವಾರವೂ ಮುಂದುವರಿದಿದೆ.

ಬಂಡಾಯ ನಾಯಕ ಶಿವಸೇನಾ ಶಾಸಕ ಏಕನಾಥ ಶಿಂಧೆ ಅವರು ಕಳುಹಿಸಿದ್ದ ಮೊದಲ ಪತ್ರದಲ್ಲಿ ಬಹಳಷ್ಟು ತಪ್ಪುಗಳಿವೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ನಾಯಕ ಅತುಲ್ ಲೊಂಧೆ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಮೊದಲು ಶಿಂಧೆ ಅವರು ತಮಗೆ 34 ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದರು. ಆದರೆ, ಅವರದೇ ಪಕ್ಷ, 12 ಶಾಸಕರ ಅನರ್ಹತೆಗೆ ಕೋರಿಕೆ ಸಲ್ಲಿಸಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಶಾಸಕರ ಬಂಡಾಯ ಮತ್ತು ಮೈತ್ರಿ ಸರ್ಕಾರದ ವಿರುದ್ಧ ದನಿ ಎತ್ತಿರುವುದನ್ನು ವಿರೋಧಿಸಿರುವ ಕಾಂಗ್ರೆಸ್, ಮಹಾ ಸರ್ಕಾರಕ್ಕೆ ಬೆಂಬಲ ಮುಂದುವರಿಸುವುದಾಗಿ ಹೇಳಿದೆ.

ಮೈತ್ರಿಕೂಟದ ಮತ್ತೊಂದು ಪಕ್ಷ ಎನ್‌ಸಿಪಿ ಕೂಡ ಬೆಂಬಲ ಮುಂದುವರಿಸುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT