<p><strong>ನವದೆಹಲಿ:</strong> ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಜಾರಿಗೆ ತರುವ ಕುರಿತು ಸಂಸತ್ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ಹೀಗಾಗಿ ಕಲಾಪದಲ್ಲಿ ಕಡ್ಡಾಯವಾಗಿ ಎಲ್ಲರೂ ಹಾಜರಿರುವಂತೆ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿವೆ.</p><p>ಲೋಕಸಭೆಯಲ್ಲಿರುವ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ಗುರುವಾರ, ಶುಕ್ರವಾರ ಮತ್ತು ಶನಿವಾರದಂದು (ಏ. 16,17 ಮತ್ತು 19) ಬೆಳಿಗ್ಗೆ 11 ಗಂಟೆಯಿಂದ ಸದನವನ್ನು ಮುಂದೂಡುವವರೆಗೂ ಹಾಜರಿದ್ದು, ಪಕ್ಷದ ನಿಲುವನ್ನು ಬೆಂಬಲಿಸುವಂತೆ ವಿನಂತಿಸಲಾಗಿದೆ. ಈ ಮೂರು ದಿನ ಸದನದಲ್ಲಿ ಕೆಲವು ಮುಖ್ಯವಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ವಿಪ್ನಲ್ಲಿ ನಮೂದಿಸಿ ಕಾಂಗ್ರೆಸ್ ತನ್ನ ಲೋಕಸಭಾ ಸದಸ್ಯರಿಗೆ ತಿಳಿಸಿದೆ. ಅದೇ ರೀತಿ, ಬಿಜೆಪಿಯೂ ತನ್ನ ಸದಸ್ಯರಿಗೆ ಸದನದಲ್ಲಿ ಕಡ್ಡಾಯವಾಗಿ ಹಾಜರಿರಲು ವಿಪ್ನಲ್ಲಿ ಸೂಚಿಸಿದೆ.</p><p>ಏಪ್ರಿಲ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯುವ ವಿಶೇಷ ಸದನದ ಅಧಿವೇಶನದಲ್ಲಿ ‘ನಾರಿ ಶಕ್ತಿ ವಂದನ ಅಧಿನಿಯಮ’ ತಿದ್ದುಪಡಿ ಮಸೂದೆಯನ್ನು 2023ರಲ್ಲಿ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. 2029ರ ಮೊದಲು ಇದನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಯೋಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಜಾರಿಗೆ ತರುವ ಕುರಿತು ಸಂಸತ್ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ಹೀಗಾಗಿ ಕಲಾಪದಲ್ಲಿ ಕಡ್ಡಾಯವಾಗಿ ಎಲ್ಲರೂ ಹಾಜರಿರುವಂತೆ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿವೆ.</p><p>ಲೋಕಸಭೆಯಲ್ಲಿರುವ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ಗುರುವಾರ, ಶುಕ್ರವಾರ ಮತ್ತು ಶನಿವಾರದಂದು (ಏ. 16,17 ಮತ್ತು 19) ಬೆಳಿಗ್ಗೆ 11 ಗಂಟೆಯಿಂದ ಸದನವನ್ನು ಮುಂದೂಡುವವರೆಗೂ ಹಾಜರಿದ್ದು, ಪಕ್ಷದ ನಿಲುವನ್ನು ಬೆಂಬಲಿಸುವಂತೆ ವಿನಂತಿಸಲಾಗಿದೆ. ಈ ಮೂರು ದಿನ ಸದನದಲ್ಲಿ ಕೆಲವು ಮುಖ್ಯವಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ವಿಪ್ನಲ್ಲಿ ನಮೂದಿಸಿ ಕಾಂಗ್ರೆಸ್ ತನ್ನ ಲೋಕಸಭಾ ಸದಸ್ಯರಿಗೆ ತಿಳಿಸಿದೆ. ಅದೇ ರೀತಿ, ಬಿಜೆಪಿಯೂ ತನ್ನ ಸದಸ್ಯರಿಗೆ ಸದನದಲ್ಲಿ ಕಡ್ಡಾಯವಾಗಿ ಹಾಜರಿರಲು ವಿಪ್ನಲ್ಲಿ ಸೂಚಿಸಿದೆ.</p><p>ಏಪ್ರಿಲ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯುವ ವಿಶೇಷ ಸದನದ ಅಧಿವೇಶನದಲ್ಲಿ ‘ನಾರಿ ಶಕ್ತಿ ವಂದನ ಅಧಿನಿಯಮ’ ತಿದ್ದುಪಡಿ ಮಸೂದೆಯನ್ನು 2023ರಲ್ಲಿ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. 2029ರ ಮೊದಲು ಇದನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಯೋಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>