ನವದೆಹಲಿ: ಉತ್ತರಪ್ರದೇಶ ಚುನಾವಣೆ ಸಿದ್ಧತೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ಭಾನುವಾರ ಪ್ರಣಾಳಿಕೆ, ಸದಸ್ಯತ್ವ, ಯೋಜನಾ ಅನುಷ್ಠಾನ, ಪಂಚಾಯಿತಿ ಚುನಾವಣೆ, ಮಾಧ್ಯಮ ಸೇರಿದಂತೆ ಏಳು ಸಮಿತಿಗಳ ರಚನೆ ಮಾಡಿದೆ. ಪಕ್ಷದಲ್ಲಿನ ನಾಯಕತ್ವ ಸುಧಾರಣೆಗೆ ಆಗ್ರಹಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದವರ ಪೈಕಿ ಕೆಲವು ನಾಯಕರಿಗೆ ಯಾವುದೇ ಸಮಿತಿಯಲ್ಲಿ ಸ್ಥಾನ ಲಭಿಸಿಲ್ಲ.