ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ದಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ಅವರನ್ನು ತನ್ನ ವಿದ್ಯಾರ್ಥಿ ಘಟಕ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಎಐಸಿಸಿ ಉಸ್ತುವಾರಿಯನ್ನಾಗಿ ಕಾಂಗ್ರೆಸ್ ಗುರುವಾರ ನೇಮಕ ಮಾಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಯ್ಯ ಕುಮಾರ್ ಅವರನ್ನು ಎನ್ಎಸ್ಯುಐನ ಎಐಸಿಸಿ ಉಸ್ತುವಾರಿಯನ್ನಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೇಳಿಕೆ ನೀಡಿದ್ದಾರೆ.
ನೀರಜ್ ಕುಂದನ್ ಅವರು ಎನ್ಎಸ್ಯುಐ ಅಧ್ಯಕ್ಷರಾಗಿದ್ದಾರೆ.
ಇತ್ತೀಚೆಗೆ ನಡೆದ 'ಭಾರತ್ ಜೋಡೊ ಯಾತ್ರೆ'ಯಲ್ಲಿ ಭಾಗವಹಿಸಿದ್ದ ಕನ್ಹಯ್ಯಾ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದರು.