<p><strong>ನವದೆಹಲಿ</strong>: ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ಸಂಬಂಧಿಸಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕುರಿತ ಮತದಾನದಿಂದ ದೂರ ಉಳಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ಭಾರತದ ವಿದೇಶಾಂಗ ನೀತಿಯು ಅಧಃಪತನ ಹೊಂದುತ್ತಿದೆ ಎಂದು ಅದು ಆರೋಪಿಸಿದೆ.</p>.<p>ಯುದ್ಧ, ಜನಾಂಗೀಯ ಹತ್ಯೆ ವಿರುದ್ಧದ ಮತ್ತು ನ್ಯಾಯದ ಪರವಾದ ತನ್ನ ತಾತ್ವಿಕ ನಿಲುವುಗಳನ್ನ ಭಾರತವು ಕೈಬಿಟ್ಟಿದೆಯೇ? ಈ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಪಕ್ಷವು ಆಗ್ರಹಿಸಿದೆ.</p>.<p>‘ಭಾರತದ ವಿದೇಶಾಂಗ ನೀತಿಯು ದಿನದಿಂದ ದಿನಕ್ಕೆ ಅಧಃಪತನದ ಹಾದಿಯಲ್ಲಿದೆ. ಆದ್ದರಿಂದ, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವರನ್ನು ಕರೆದು, ಅವರನ್ನು ಹೊಣೆಗಾರರನ್ನಾಗಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ.</p>.<p>‘ಗಾಜಾದಲ್ಲಿ ಕದನವಿರಾಮ ಘೋಷಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ 149 ರಾಷ್ಟ್ರಗಳು ಮತ್ತು ನಿರ್ಣಯದ ವಿರುದ್ಧ 12 ದೇಶಗಳು ಸಹಿ ಮಾಡಿವೆ. ಮತದಾನದಿಂದ ಹೊರಗುಳಿದ 19 ರಾಷ್ಟ್ರಗಳ ಪೈಕಿ ಭಾರತವೂ ಒಂದು’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ಸಂಬಂಧಿಸಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕುರಿತ ಮತದಾನದಿಂದ ದೂರ ಉಳಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ಭಾರತದ ವಿದೇಶಾಂಗ ನೀತಿಯು ಅಧಃಪತನ ಹೊಂದುತ್ತಿದೆ ಎಂದು ಅದು ಆರೋಪಿಸಿದೆ.</p>.<p>ಯುದ್ಧ, ಜನಾಂಗೀಯ ಹತ್ಯೆ ವಿರುದ್ಧದ ಮತ್ತು ನ್ಯಾಯದ ಪರವಾದ ತನ್ನ ತಾತ್ವಿಕ ನಿಲುವುಗಳನ್ನ ಭಾರತವು ಕೈಬಿಟ್ಟಿದೆಯೇ? ಈ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಪಕ್ಷವು ಆಗ್ರಹಿಸಿದೆ.</p>.<p>‘ಭಾರತದ ವಿದೇಶಾಂಗ ನೀತಿಯು ದಿನದಿಂದ ದಿನಕ್ಕೆ ಅಧಃಪತನದ ಹಾದಿಯಲ್ಲಿದೆ. ಆದ್ದರಿಂದ, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವರನ್ನು ಕರೆದು, ಅವರನ್ನು ಹೊಣೆಗಾರರನ್ನಾಗಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ.</p>.<p>‘ಗಾಜಾದಲ್ಲಿ ಕದನವಿರಾಮ ಘೋಷಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ 149 ರಾಷ್ಟ್ರಗಳು ಮತ್ತು ನಿರ್ಣಯದ ವಿರುದ್ಧ 12 ದೇಶಗಳು ಸಹಿ ಮಾಡಿವೆ. ಮತದಾನದಿಂದ ಹೊರಗುಳಿದ 19 ರಾಷ್ಟ್ರಗಳ ಪೈಕಿ ಭಾರತವೂ ಒಂದು’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>