<p><strong>ನವದೆಹಲಿ</strong>: ‘ಗಾಂಧಿ’ ಸಿನಿಮಾ ಬರುವವರೆಗೂ ಮಹಾತ್ಮ ಗಾಂಧಿ ಬಗ್ಗೆ ಜಗತ್ತಿಗೆ ಗೊತ್ತಿರಲಿಲ್ಲ ಎನ್ನುವ ಪ್ರಧಾನಿ ನರೇಂದ್ರ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದೆ.</p>.<p>ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನಾಥೂರಾಂ ಗೋಡ್ಸೆ ಜತೆ ಗಾಂಧಿ ಕೊಲೆಯಲ್ಲಿ ಭಾಗಿಯಾಗಿದ್ದವರ ಸಿದ್ಧಾಂತವನ್ನು ಅನುಸರಿಸುವವರು ಎಂದಿಗೂ ಮಹಾತ್ಮನ ಸತ್ಯದ ಹಾದಿಯಲ್ಲಿ ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. </p>.<p>ಪ್ರಧಾನಿ ಮೋದಿ ಹೇಳಿಕೆಯನ್ನು ಲೇವಡಿ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಎಂಟೈರ್ ಪೊಲಿಟಿಕಲ್ ಸೈನ್ಸ್’ ವಿದ್ಯಾರ್ಥಿ ಮಾತ್ರ ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿಯಬೇಕು’ ಎಂದಿದ್ದಾರೆ.</p>.<p>ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಪ್ರಧಾನಿ ಮೋದಿ, ‘ಜಗತ್ತಿನಲ್ಲಿ ಮಹಾತ್ಮ ಗಾಂಧಿ ಶ್ರೇಷ್ಠ ವ್ಯಕ್ತಿ. ಈ 75 ವರ್ಷದಲ್ಲಿ ಅವರನ್ನು ಇಡೀ ಜಗತ್ತು ಅರಿಯುವಂತೆ ಮಾಡುವುದು ನಮ್ಮ ಜವಾಬ್ದಾರಿಯಲ್ಲವೇ. ಆದರೆ, ಅವರ ಬಗ್ಗೆ ಯಾರಿಗೂ ಗೊತ್ತಿಲ್ಲ. ‘ಗಾಂಧಿ’ ಸಿನಿಮಾ ಬಂದಾಗ ಮೊದಲ ಬಾರಿಗೆ ಈ ವ್ಯಕ್ತಿ ಯಾರು ಎನ್ನುವ ಬಗ್ಗೆ ಜಗತ್ತಿನಾದ್ಯಂತ ಕುತೂಹಲ ಮೂಡಿತ್ತು’ ಎಂದು ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಗಾಂಧಿ’ ಸಿನಿಮಾ ಬರುವವರೆಗೂ ಮಹಾತ್ಮ ಗಾಂಧಿ ಬಗ್ಗೆ ಜಗತ್ತಿಗೆ ಗೊತ್ತಿರಲಿಲ್ಲ ಎನ್ನುವ ಪ್ರಧಾನಿ ನರೇಂದ್ರ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದೆ.</p>.<p>ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನಾಥೂರಾಂ ಗೋಡ್ಸೆ ಜತೆ ಗಾಂಧಿ ಕೊಲೆಯಲ್ಲಿ ಭಾಗಿಯಾಗಿದ್ದವರ ಸಿದ್ಧಾಂತವನ್ನು ಅನುಸರಿಸುವವರು ಎಂದಿಗೂ ಮಹಾತ್ಮನ ಸತ್ಯದ ಹಾದಿಯಲ್ಲಿ ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. </p>.<p>ಪ್ರಧಾನಿ ಮೋದಿ ಹೇಳಿಕೆಯನ್ನು ಲೇವಡಿ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಎಂಟೈರ್ ಪೊಲಿಟಿಕಲ್ ಸೈನ್ಸ್’ ವಿದ್ಯಾರ್ಥಿ ಮಾತ್ರ ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿಯಬೇಕು’ ಎಂದಿದ್ದಾರೆ.</p>.<p>ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಪ್ರಧಾನಿ ಮೋದಿ, ‘ಜಗತ್ತಿನಲ್ಲಿ ಮಹಾತ್ಮ ಗಾಂಧಿ ಶ್ರೇಷ್ಠ ವ್ಯಕ್ತಿ. ಈ 75 ವರ್ಷದಲ್ಲಿ ಅವರನ್ನು ಇಡೀ ಜಗತ್ತು ಅರಿಯುವಂತೆ ಮಾಡುವುದು ನಮ್ಮ ಜವಾಬ್ದಾರಿಯಲ್ಲವೇ. ಆದರೆ, ಅವರ ಬಗ್ಗೆ ಯಾರಿಗೂ ಗೊತ್ತಿಲ್ಲ. ‘ಗಾಂಧಿ’ ಸಿನಿಮಾ ಬಂದಾಗ ಮೊದಲ ಬಾರಿಗೆ ಈ ವ್ಯಕ್ತಿ ಯಾರು ಎನ್ನುವ ಬಗ್ಗೆ ಜಗತ್ತಿನಾದ್ಯಂತ ಕುತೂಹಲ ಮೂಡಿತ್ತು’ ಎಂದು ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>