<p class="title"><strong>ನವದೆಹಲಿ:</strong> ಕೇಂದ್ರದ ಕೃಷಿ ಮಸೂದೆಗಳು ರೈತರನ್ನು ಗುಲಾಮಗಿರಿಯತ್ತ ಒಯ್ಯಲಿದ್ದು, ಕನಿಷ್ಠ ಬೆಂಬಲ ಬೆಲೆ ಅವಕಾಶವನ್ನು ಕಸಿಯಲಿವೆ ಎಂದು ಟೀಕಿಸಿರುವ ಕಾಂಗ್ರೆಸ್ ಪಕ್ಷ, ಕೃಷಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿದೆ.</p>.<p class="title">ಮೂರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ವಿವಿಧ ಕೃಷಿಕ ಸಂಘಟನೆಗಳು ಶುಕ್ರವಾರ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಈ ಮಸೂದೆಗಳನ್ನು ಸಂಸತ್ತು ಅಂಗೀಕರಿಸಿದ್ದು, ರಾಷ್ಟ್ರಪತಿ ಅಂಕಿತ ದೊರೆಯಬೇಕಿದೆ.</p>.<p>ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಣದೀಪ್ ಸುರ್ಜೆವಾಲಾ ಅವರು ಈ ಮಸೂದೆಗಳ ಪರಿಣಾಮ ಕುರಿತು ಮಾತನಾಡಿದ್ದು, ಬಂದ್ ಅನ್ನು ಬೆಂಬಲಿಸಿದ್ದಾರೆ.</p>.<p>ದೋಷಪೂರಿತ ಜಿ.ಎಸ್.ಟಿ ಸಣ್ಣ ಉದ್ದಿಮೆಗಳನ್ನು ನಾಶಪಡಿಸಿತು. ನೂತನ ಕೃಷಿ ಕಾಯ್ದೆಗಳು ಕೃಷಿಕರನ್ನು ಗುಲಾಮರಾಗಿಸುತ್ತವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ಹೊಸ ಮಸೂದೆಯು ಕೃಷಿಕರಿಗೆ ಇರುವ ಕನಿಷ್ಠ ಬೆಂಬಲ ಬೆಲೆ ಅವಕಾಶವನ್ನು ಕಸಿದುಕೊಳ್ಳುತ್ತದೆ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. ರೈತರಿಗೆ ಬೆಲೆಯು ಸಿಗುವುದಿಲ್ಲ, ಗೌರವವೂ ಸಿಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಕೃಷಿಕರು ಕರೆ ನೀಡಿರುವ ಭಾರತ್ ಬಂದ್ ಅನ್ನು ಪಕ್ಷ ಬೆಂಬಲಿಸಲಿದೆ. ದೇಶದ ಕೃಷಿಕರ ಬದುಕನ್ನು ಮೋದಿ ಸರ್ಕಾರ ಕಸಿದುಕೊಳ್ಳುತ್ತಿದ್ದು, ರೈತರ ಮೇಲೆ ದಾಳಿ ನಡೆಸಿದೆ ಎಂದು ಸುರ್ಜೆವಾಲಾ ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೇಂದ್ರದ ಕೃಷಿ ಮಸೂದೆಗಳು ರೈತರನ್ನು ಗುಲಾಮಗಿರಿಯತ್ತ ಒಯ್ಯಲಿದ್ದು, ಕನಿಷ್ಠ ಬೆಂಬಲ ಬೆಲೆ ಅವಕಾಶವನ್ನು ಕಸಿಯಲಿವೆ ಎಂದು ಟೀಕಿಸಿರುವ ಕಾಂಗ್ರೆಸ್ ಪಕ್ಷ, ಕೃಷಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿದೆ.</p>.<p class="title">ಮೂರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ವಿವಿಧ ಕೃಷಿಕ ಸಂಘಟನೆಗಳು ಶುಕ್ರವಾರ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಈ ಮಸೂದೆಗಳನ್ನು ಸಂಸತ್ತು ಅಂಗೀಕರಿಸಿದ್ದು, ರಾಷ್ಟ್ರಪತಿ ಅಂಕಿತ ದೊರೆಯಬೇಕಿದೆ.</p>.<p>ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಣದೀಪ್ ಸುರ್ಜೆವಾಲಾ ಅವರು ಈ ಮಸೂದೆಗಳ ಪರಿಣಾಮ ಕುರಿತು ಮಾತನಾಡಿದ್ದು, ಬಂದ್ ಅನ್ನು ಬೆಂಬಲಿಸಿದ್ದಾರೆ.</p>.<p>ದೋಷಪೂರಿತ ಜಿ.ಎಸ್.ಟಿ ಸಣ್ಣ ಉದ್ದಿಮೆಗಳನ್ನು ನಾಶಪಡಿಸಿತು. ನೂತನ ಕೃಷಿ ಕಾಯ್ದೆಗಳು ಕೃಷಿಕರನ್ನು ಗುಲಾಮರಾಗಿಸುತ್ತವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ಹೊಸ ಮಸೂದೆಯು ಕೃಷಿಕರಿಗೆ ಇರುವ ಕನಿಷ್ಠ ಬೆಂಬಲ ಬೆಲೆ ಅವಕಾಶವನ್ನು ಕಸಿದುಕೊಳ್ಳುತ್ತದೆ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. ರೈತರಿಗೆ ಬೆಲೆಯು ಸಿಗುವುದಿಲ್ಲ, ಗೌರವವೂ ಸಿಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಕೃಷಿಕರು ಕರೆ ನೀಡಿರುವ ಭಾರತ್ ಬಂದ್ ಅನ್ನು ಪಕ್ಷ ಬೆಂಬಲಿಸಲಿದೆ. ದೇಶದ ಕೃಷಿಕರ ಬದುಕನ್ನು ಮೋದಿ ಸರ್ಕಾರ ಕಸಿದುಕೊಳ್ಳುತ್ತಿದ್ದು, ರೈತರ ಮೇಲೆ ದಾಳಿ ನಡೆಸಿದೆ ಎಂದು ಸುರ್ಜೆವಾಲಾ ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>