<p><strong>ನವದೆಹಲಿ</strong>: ಡಿಸೆಂಬರ್ 13, 14ರಂದು ಲೋಕಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆ ನಡೆಯಲಿದ್ದು, ಸದನದಲ್ಲಿ ಹಾಜರಿರುವಂತೆ ಸೂಚಿಸಿ ಸಂಸದರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮೂರು ಸಾಲುಗಳ ವಿಪ್ ಜಾರಿ ಮಾಡಿವೆ.</p><p>‘ಸಂವಿಧಾನ ಅಳವಡಿಸಿಕೊಂಡು 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ 13, 14ರಂದು ಲೋಕಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆ ನಡೆಯಲಿದೆ. ಬಿಜೆಪಿಯ ಎಲ್ಲ ಸದಸ್ಯರು ಹಾಜರಿದ್ದು, ಸರ್ಕಾರದ ನಿಲುವನ್ನು ಬೆಂಬಲಿಸುವಂತೆ ಕೋರಲಾಗಿದೆ’ಎಂದು ಬಿಜೆಪಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. </p><p>ಎರಡು ದಿನ ಸಂವಿಧಾನ ಕುರಿತು ನಡೆಯಲಿರುವ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಡಿಸೆಂಬರ್ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಚರ್ಚೆ ಆರಂಭಿಸಲಿದ್ದಾರೆ. </p>. <p>ಡಿಸೆಂಬರ್ 13ರಂದು ಸದನದಲ್ಲಿ ಸಂವಿಧಾನ ಕುರಿತ ಚರ್ಚೆ ನಡೆಯಬೇಕು. ಹಾಗಾಗಿ, ಸದನದ ಕಲಾಪ ಸುಗಮವಾಗಿ ನಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಮಧಿ ಸಹ ಹೇಳಿದ್ದರು.</p><p>‘ನಾನು ಲೋಕಸಭಾ ಸದಸ್ಯರನ್ನು ಭೇಟಿ ಮಾಡಿ ತನ್ನ ವಿರುದ್ಧ ಬಿಜೆಪಿ ಸಂಸದರು ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಡತದಿಂದ ತೆಗೆಯಬೇಕೆಂದು ಕೋರಿದೆ. ಆ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅಧ್ಯಕ್ಷರು ಹೇಳಿದ್ದಾರೆ. ನಮ್ಮ ಉದ್ದೇಶ ಸದನದ ಕಲಾಪ ಸುಗಮವಾಗಿ ನಡೆಯಬೇಕು. ಸಂವಿಧಾನ ಕುರಿತು ಚರ್ಚೆಆಗಬೇಕು’ ಎಂದು ಬುಧವಾರ ಹೇಳಿದ್ದರು.</p><p>ಅದಾನಿ ಪ್ರಕರಣಗಳ ಕುರಿತಾದ ಚರ್ಚೆಯನ್ನು ವಿಷಯಾಂತರ ಮಾಡಲು ಬಿಜೆಪಿ ಸದಸ್ಯರು ನನ್ನ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದರು.</p> .1,300ಕ್ಕೂ ಅಧಿಕ IAS, 586ಕ್ಕೂ ಅಧಿಕ IPS ಹುದ್ದೆಗಳು ಖಾಲಿ ಇವೆ: ಕೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಡಿಸೆಂಬರ್ 13, 14ರಂದು ಲೋಕಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆ ನಡೆಯಲಿದ್ದು, ಸದನದಲ್ಲಿ ಹಾಜರಿರುವಂತೆ ಸೂಚಿಸಿ ಸಂಸದರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮೂರು ಸಾಲುಗಳ ವಿಪ್ ಜಾರಿ ಮಾಡಿವೆ.</p><p>‘ಸಂವಿಧಾನ ಅಳವಡಿಸಿಕೊಂಡು 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ 13, 14ರಂದು ಲೋಕಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆ ನಡೆಯಲಿದೆ. ಬಿಜೆಪಿಯ ಎಲ್ಲ ಸದಸ್ಯರು ಹಾಜರಿದ್ದು, ಸರ್ಕಾರದ ನಿಲುವನ್ನು ಬೆಂಬಲಿಸುವಂತೆ ಕೋರಲಾಗಿದೆ’ಎಂದು ಬಿಜೆಪಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. </p><p>ಎರಡು ದಿನ ಸಂವಿಧಾನ ಕುರಿತು ನಡೆಯಲಿರುವ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಡಿಸೆಂಬರ್ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಚರ್ಚೆ ಆರಂಭಿಸಲಿದ್ದಾರೆ. </p>. <p>ಡಿಸೆಂಬರ್ 13ರಂದು ಸದನದಲ್ಲಿ ಸಂವಿಧಾನ ಕುರಿತ ಚರ್ಚೆ ನಡೆಯಬೇಕು. ಹಾಗಾಗಿ, ಸದನದ ಕಲಾಪ ಸುಗಮವಾಗಿ ನಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಮಧಿ ಸಹ ಹೇಳಿದ್ದರು.</p><p>‘ನಾನು ಲೋಕಸಭಾ ಸದಸ್ಯರನ್ನು ಭೇಟಿ ಮಾಡಿ ತನ್ನ ವಿರುದ್ಧ ಬಿಜೆಪಿ ಸಂಸದರು ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಡತದಿಂದ ತೆಗೆಯಬೇಕೆಂದು ಕೋರಿದೆ. ಆ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅಧ್ಯಕ್ಷರು ಹೇಳಿದ್ದಾರೆ. ನಮ್ಮ ಉದ್ದೇಶ ಸದನದ ಕಲಾಪ ಸುಗಮವಾಗಿ ನಡೆಯಬೇಕು. ಸಂವಿಧಾನ ಕುರಿತು ಚರ್ಚೆಆಗಬೇಕು’ ಎಂದು ಬುಧವಾರ ಹೇಳಿದ್ದರು.</p><p>ಅದಾನಿ ಪ್ರಕರಣಗಳ ಕುರಿತಾದ ಚರ್ಚೆಯನ್ನು ವಿಷಯಾಂತರ ಮಾಡಲು ಬಿಜೆಪಿ ಸದಸ್ಯರು ನನ್ನ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದರು.</p> .1,300ಕ್ಕೂ ಅಧಿಕ IAS, 586ಕ್ಕೂ ಅಧಿಕ IPS ಹುದ್ದೆಗಳು ಖಾಲಿ ಇವೆ: ಕೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>