<p><strong>ರಾಯಪುರ (ಛತ್ತೀಸಗಢ):</strong> ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬಂಧಿಸಿದೆ. ತನಿಖಾ ಸಂಸ್ಥೆಯ ಕ್ರಮವನ್ನು ಖಂಡಿಸಿದ ಕಾಂಗ್ರೆಸ್ ಶಾಸಕರು ವಿಧಾನಸಭೆಯ ಕಲಾಪವನ್ನು ಬಹಿಷ್ಕರಿಸಿದ್ದಾರೆ.</p>.<p>ಕೇಂದ್ರ ತನಿಖಾ ಸಂಸ್ಥೆ ಪ್ರತಿಪಕ್ಷಗಳಿಗೆ ಕಿರುಕುಳ ನೀಡಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. </p>.<p>ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚೈತನ್ಯ ಬಘೇಲ್ ಅವರನ್ನು ಇ.ಡಿ ಬಂಧಿಸಿದೆ. ಇದಕ್ಕೂ ಮುನ್ನ ಚೈತನ್ಯ ಹಾಗೂ ಅವರ ತಂದೆ(ಭೂಪೇಶ್ ಬಘೇಲ್) ವಾಸವಿರುವ ಭಿಲಾಯಿ ಪಟ್ಟಣದ ಮನೆಯಲ್ಲಿ ಇ.ಡಿ ಶೋಧ ನಡೆಸಿತ್ತು.</p>.ಛತ್ತೀಸ್ಗಢ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಮನೆ ಮೇಲೆ ಇ.ಡಿ ದಾಳಿ.<p>ಸದನದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್, ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪ್ರಶ್ನಿಸಿದರು. ಜಾರಿ ನಿರ್ದೇಶನಾಲಯ ನಮ್ಮ ಮೇಲೆ ಒತ್ತಡ ಹೇರುವುದಲ್ಲದೇ, ನಮಗೆ ಮತ್ತು ಕುಟುಂಬ ಸದಸ್ಯರಿಗೆ ಕಿರುಕುಳ ನೀಡಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.</p>.<p>ಚೈತನ್ಯ ಬಘೇಲ್ ಅವರ ಹುಟ್ಟುಹಬ್ಬದಂದು ಬಂಧಿಸಲಾಗಿದೆ. ನಾವು ಈ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ. ವಿಧಾನಸಭೆಯ ಕಲಾಪಗಳನ್ನು ಬಹಿಷ್ಕರಿಸುತ್ತೇವೆ ಎಂದು ಮಹಂತ್ ಹೇಳಿದರು. ಬಳಿಕ ಭೂಪೇಶ್ ಬಘೇಲ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರನಡೆದರು. </p>.<p>ಛತ್ತೀಸಗಢದಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇಂದು(ಶುಕ್ರವಾರ) ಕೊನೆಯ ದಿನವಾಗಿದೆ.</p>.<p>ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ(2019–2022) ಬಹುಕೋಟಿ ಮೊತ್ತದ ಅಬಕಾರಿ ಹಗರಣ ನಡೆದಿದೆ ಎಂದು ಇ.ಡಿ ಆರೋಪಿಸಿದೆ. ತನಿಖೆಯ ಭಾಗವಾಗಿ ವಿವಿಧ ಆರೋಪಿಗಳ ಸುಮಾರು ₹205 ಕೋಟಿ ಮೌಲ್ಯದ ಆಸ್ತಿಯನ್ನು ತನಿಖಾ ಸಂಸ್ಥೆ ಮುಟ್ಟುಗೋಲು ಹಾಕಿಕೊಂಡಿದೆ. </p> .ಛತ್ತೀಸಗಢ | ಅಬಕಾರಿ ಹಗರಣ: ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ (ಛತ್ತೀಸಗಢ):</strong> ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬಂಧಿಸಿದೆ. ತನಿಖಾ ಸಂಸ್ಥೆಯ ಕ್ರಮವನ್ನು ಖಂಡಿಸಿದ ಕಾಂಗ್ರೆಸ್ ಶಾಸಕರು ವಿಧಾನಸಭೆಯ ಕಲಾಪವನ್ನು ಬಹಿಷ್ಕರಿಸಿದ್ದಾರೆ.</p>.<p>ಕೇಂದ್ರ ತನಿಖಾ ಸಂಸ್ಥೆ ಪ್ರತಿಪಕ್ಷಗಳಿಗೆ ಕಿರುಕುಳ ನೀಡಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. </p>.<p>ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚೈತನ್ಯ ಬಘೇಲ್ ಅವರನ್ನು ಇ.ಡಿ ಬಂಧಿಸಿದೆ. ಇದಕ್ಕೂ ಮುನ್ನ ಚೈತನ್ಯ ಹಾಗೂ ಅವರ ತಂದೆ(ಭೂಪೇಶ್ ಬಘೇಲ್) ವಾಸವಿರುವ ಭಿಲಾಯಿ ಪಟ್ಟಣದ ಮನೆಯಲ್ಲಿ ಇ.ಡಿ ಶೋಧ ನಡೆಸಿತ್ತು.</p>.ಛತ್ತೀಸ್ಗಢ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಮನೆ ಮೇಲೆ ಇ.ಡಿ ದಾಳಿ.<p>ಸದನದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್, ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪ್ರಶ್ನಿಸಿದರು. ಜಾರಿ ನಿರ್ದೇಶನಾಲಯ ನಮ್ಮ ಮೇಲೆ ಒತ್ತಡ ಹೇರುವುದಲ್ಲದೇ, ನಮಗೆ ಮತ್ತು ಕುಟುಂಬ ಸದಸ್ಯರಿಗೆ ಕಿರುಕುಳ ನೀಡಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.</p>.<p>ಚೈತನ್ಯ ಬಘೇಲ್ ಅವರ ಹುಟ್ಟುಹಬ್ಬದಂದು ಬಂಧಿಸಲಾಗಿದೆ. ನಾವು ಈ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ. ವಿಧಾನಸಭೆಯ ಕಲಾಪಗಳನ್ನು ಬಹಿಷ್ಕರಿಸುತ್ತೇವೆ ಎಂದು ಮಹಂತ್ ಹೇಳಿದರು. ಬಳಿಕ ಭೂಪೇಶ್ ಬಘೇಲ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರನಡೆದರು. </p>.<p>ಛತ್ತೀಸಗಢದಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇಂದು(ಶುಕ್ರವಾರ) ಕೊನೆಯ ದಿನವಾಗಿದೆ.</p>.<p>ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ(2019–2022) ಬಹುಕೋಟಿ ಮೊತ್ತದ ಅಬಕಾರಿ ಹಗರಣ ನಡೆದಿದೆ ಎಂದು ಇ.ಡಿ ಆರೋಪಿಸಿದೆ. ತನಿಖೆಯ ಭಾಗವಾಗಿ ವಿವಿಧ ಆರೋಪಿಗಳ ಸುಮಾರು ₹205 ಕೋಟಿ ಮೌಲ್ಯದ ಆಸ್ತಿಯನ್ನು ತನಿಖಾ ಸಂಸ್ಥೆ ಮುಟ್ಟುಗೋಲು ಹಾಕಿಕೊಂಡಿದೆ. </p> .ಛತ್ತೀಸಗಢ | ಅಬಕಾರಿ ಹಗರಣ: ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>