<div dir="ltr"><strong>ನವದೆಹಲಿ</strong>: ರಾಷ್ಟ್ರೀಯ ಸಮಸ್ಯೆಗಳ ಕುರಿತು ನಿರಂತರ ಆಂದೋಲನಗಳನ್ನು ನಡೆಸಲು ಕಾಂಗ್ರೆಸ್ ಪಕ್ಷವು ಪ್ರಿಯಾಂಕಾ ಗಾಂಧಿ ಜತೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ.</div>.<div dir="ltr">ಬಿಜೆಪಿಯ ಕಟು ಹಿಂದುತ್ವ ರಾಜಕಾರಣದ ಟೀಕಾಕಾರರಾದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.</div>.<div dir="ltr">ಪ್ರಿಯಾಂಕಾ ಹೊರತುಪಡಿಸಿ, ಒಂಬತ್ತು ಸದಸ್ಯರ ಸಮಿತಿಯಲ್ಲಿ ಸಂಸದ ಉತ್ತಮ್ ಕುಮಾರ್ ರೆಡ್ಡಿ, ರಾಜ್ಯಸಭಾ ಸಂಸದ ರಿಪುನ್ ಬೋರಾ, ಮನೀಶ್ ಚತ್ರಥ, ಬಿ.ಕೆ ಹರಿಪ್ರಸಾದ್, ಉದಿತ್ ರಾಜ್, ರಾಗಿಣಿ ನಾಯಕ್ ಮತ್ತು ಜುಬೇರ್ ಖಾನ್ ಇದ್ದಾರೆ.</div>.<p>ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲಿರುವ ಈ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕರಡು ರಚನೆಯು ಮಹತ್ವ ಪಡೆದುಕೊಂಡಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವ್ಯಾಪ್ತಿ ಮೀರಿದ ಸಮಸ್ಯೆಗಳನ್ನು ಅಧಿಕೃತವಾಗಿ ಕೈಗೆತ್ತಿಕೊಳ್ಳುತ್ತಿದ್ದಾರೆ.</p>.<p>ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸರ್ಕಾರವು ಪ್ರತಿ ತಿಂಗಳು ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಮೂರು-ನಾಲ್ಕು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 60 ರಿಂದ 70 ಬಾರಿ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದರು.</p>.<p>19 ರಾಜಕೀಯ ಪಕ್ಷಗಳ ನಾಯಕರು ಸೆಪ್ಟೆಂಬರ್ 20ರಿಂದ 30 ರವರೆಗೆ ದೇಶದಾದ್ಯಂತ ಜಂಟಿಯಾಗಿ ಪ್ರತಿಭಟನೆ ಆಯೋಜಿಸುವುದಾಗಿ ಆ.20 ರಂದು ಘೋಷಿಸಿದ ನಂತರ ಈ ಸಮಿತಿ ರಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><strong>ನವದೆಹಲಿ</strong>: ರಾಷ್ಟ್ರೀಯ ಸಮಸ್ಯೆಗಳ ಕುರಿತು ನಿರಂತರ ಆಂದೋಲನಗಳನ್ನು ನಡೆಸಲು ಕಾಂಗ್ರೆಸ್ ಪಕ್ಷವು ಪ್ರಿಯಾಂಕಾ ಗಾಂಧಿ ಜತೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ.</div>.<div dir="ltr">ಬಿಜೆಪಿಯ ಕಟು ಹಿಂದುತ್ವ ರಾಜಕಾರಣದ ಟೀಕಾಕಾರರಾದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.</div>.<div dir="ltr">ಪ್ರಿಯಾಂಕಾ ಹೊರತುಪಡಿಸಿ, ಒಂಬತ್ತು ಸದಸ್ಯರ ಸಮಿತಿಯಲ್ಲಿ ಸಂಸದ ಉತ್ತಮ್ ಕುಮಾರ್ ರೆಡ್ಡಿ, ರಾಜ್ಯಸಭಾ ಸಂಸದ ರಿಪುನ್ ಬೋರಾ, ಮನೀಶ್ ಚತ್ರಥ, ಬಿ.ಕೆ ಹರಿಪ್ರಸಾದ್, ಉದಿತ್ ರಾಜ್, ರಾಗಿಣಿ ನಾಯಕ್ ಮತ್ತು ಜುಬೇರ್ ಖಾನ್ ಇದ್ದಾರೆ.</div>.<p>ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲಿರುವ ಈ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕರಡು ರಚನೆಯು ಮಹತ್ವ ಪಡೆದುಕೊಂಡಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವ್ಯಾಪ್ತಿ ಮೀರಿದ ಸಮಸ್ಯೆಗಳನ್ನು ಅಧಿಕೃತವಾಗಿ ಕೈಗೆತ್ತಿಕೊಳ್ಳುತ್ತಿದ್ದಾರೆ.</p>.<p>ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸರ್ಕಾರವು ಪ್ರತಿ ತಿಂಗಳು ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಮೂರು-ನಾಲ್ಕು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 60 ರಿಂದ 70 ಬಾರಿ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದರು.</p>.<p>19 ರಾಜಕೀಯ ಪಕ್ಷಗಳ ನಾಯಕರು ಸೆಪ್ಟೆಂಬರ್ 20ರಿಂದ 30 ರವರೆಗೆ ದೇಶದಾದ್ಯಂತ ಜಂಟಿಯಾಗಿ ಪ್ರತಿಭಟನೆ ಆಯೋಜಿಸುವುದಾಗಿ ಆ.20 ರಂದು ಘೋಷಿಸಿದ ನಂತರ ಈ ಸಮಿತಿ ರಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>