<p><strong>ಮಲಪ್ಪುರಂ</strong>: ‘ಹರಿಯಾಣದ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಳಿಬಂದಿರುವ ‘ಕಾಸಿಗಾಗಿ ಸೀಟು’ ಆರೋಪವು ಅತ್ಯಂತ ಗಂಭೀರವಾದುದು. ಪಕ್ಷದ ವರಿಷ್ಠರು ಈ ಬಗ್ಗೆ ಉತ್ತರ ನೀಡಬೇಕು’ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. </p><p>ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಅವರ ಆಪ್ತರು ಭಾರಿ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ. ಆರೋಪದ ಬಗ್ಗೆ ಪಕ್ಷ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. </p><p>ಬಿಜೆಪಿ ಪ್ರಾಯೋಜಿತ: ‘ತಮ್ಮ ವಿರುದ್ಧ ದಾಖಲಾಗಿರುವ ‘ಕಾಸಿಗಾಗಿ ಸೀಟು’ ಪ್ರಕರಣವು ಬಿಜೆಪಿ–ಸಿಪಿಎಂ ಪ್ರಾಯೋಜಿತ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ‘ಚುನಾವಣಾ ಪ್ರಕ್ರಿಯೆಯ ಭಾಗವಾಗಿ ಈ ಪ್ರಕರಣವನ್ನು ಸೃಷ್ಟಿಸಲಾಗಿದೆ. ಯಾವುದೇ ಭಯವಿಲ್ಲ ಕಾನೂನು ಪ್ರಕಾರ ಮುಂದುವರಿಯುತ್ತೇನೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲಪ್ಪುರಂ</strong>: ‘ಹರಿಯಾಣದ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಳಿಬಂದಿರುವ ‘ಕಾಸಿಗಾಗಿ ಸೀಟು’ ಆರೋಪವು ಅತ್ಯಂತ ಗಂಭೀರವಾದುದು. ಪಕ್ಷದ ವರಿಷ್ಠರು ಈ ಬಗ್ಗೆ ಉತ್ತರ ನೀಡಬೇಕು’ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. </p><p>ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಅವರ ಆಪ್ತರು ಭಾರಿ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ. ಆರೋಪದ ಬಗ್ಗೆ ಪಕ್ಷ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. </p><p>ಬಿಜೆಪಿ ಪ್ರಾಯೋಜಿತ: ‘ತಮ್ಮ ವಿರುದ್ಧ ದಾಖಲಾಗಿರುವ ‘ಕಾಸಿಗಾಗಿ ಸೀಟು’ ಪ್ರಕರಣವು ಬಿಜೆಪಿ–ಸಿಪಿಎಂ ಪ್ರಾಯೋಜಿತ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ‘ಚುನಾವಣಾ ಪ್ರಕ್ರಿಯೆಯ ಭಾಗವಾಗಿ ಈ ಪ್ರಕರಣವನ್ನು ಸೃಷ್ಟಿಸಲಾಗಿದೆ. ಯಾವುದೇ ಭಯವಿಲ್ಲ ಕಾನೂನು ಪ್ರಕಾರ ಮುಂದುವರಿಯುತ್ತೇನೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>