ನವದಹೆಲಿ: ದೇಶದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ಅಪರಾಧಗಳಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಗುರಿಯಾಗಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಸಮಾಜವನ್ನು ವಿಭಜಿಸುವ ಬಿಜೆಪಿಯ ಅಜೆಂಡಾದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ (ಎನ್ಸಿಆರ್ಬಿ) ಬಿಡುಗಡೆಗೊಳಿಸಿರುವ ಇತ್ತೀಚಿನ ವರದಿಯು ಕೇವಲ ಅಂಕಿಅಂಶಗಳಲ್ಲ, ಇದು ಎಸ್ಸಿ – ಎಸ್ಟಿ ಸಮುದಾಯದ ಜೀವನವನ್ನು ಅಸುರಕ್ಷಿತವಾಗಿಸುವ ಬಿಜೆಪಿಯ ದಾಖಲೆಯಾಗಿದೆ’ ಎಂದು ಹೇಳಿದ್ದಾರೆ.
राष्ट्रीय अपराध रिकॉर्ड ब्यूरो (NCRB) की ताज़ी रिपोर्ट, केवल आँकड़ें मात्र नहीं हैं, SC-ST समाज के जीवन को असुरक्षित बनाने का भाजपाई काला चिट्ठा है।
अन्याय, अत्याचार और दमन, पिछले एक दशक से भाजपा द्वारा समाज को बांटने के षड्यंत्रकारी एजेंडे का हिस्सा है।
ಅನ್ಯಾಯ ಮತ್ತು ದೌರ್ಜನ್ಯದ ಮೂಲಕ ಸಮಾಜವನ್ನು ಒಡೆಯುವುದು ಬಿಜೆಪಿಯ ಷಡ್ಯಂತ್ರದ ಭಾಗವಾಗಿದೆ. ದಲಿತರು ಮತ್ತು ಆದಿವಾಸಿಗಳ ಮೇಲಿನ ನಿರಂತರ ದಬ್ಬಾಳಿಕೆಯು ಬಿಜೆಪಿ– ಆರ್ಎಸ್ಎಸ್ನ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ. 2013 ರಿಂದ ದಲಿತರ ಮೇಲಿನ ಅಪರಾಧಗಳಲ್ಲಿ ಶೇಕಡ 46.11 ಮತ್ತು ಆದಿವಾಸಿಗಳ ವಿರುದ್ಧ ಅಪರಾಧಗಳಲ್ಲಿ ಶೇಕಡ 48.15 ರಷ್ಟು ಹೆಚ್ಚಳವಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.