<p><strong>ಕೊಚ್ಚಿ:</strong> ಇಡೀ ರಾಷ್ಟ್ರವೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ದುಃಖದಲ್ಲಿರುವಾಗ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಟೀಕಿಸಿದೆ.</p><p>ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ವಿ.ಡಿ. ಸತೀಶನ್, ಮುಖ್ಯಮಂತ್ರಿಯವರು 'ಅಗೌರವ' ಹಾಗೂ 'ಅನುಚಿತ' ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ. </p><p>'ಹತ್ತು ವರ್ಷ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯುತ್ತಿರುವಾಗ, ಮುಖ್ಯಮಂತ್ರಿಯವರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಗೌರವ ಹಾಗೂ ಅನುಚಿತ ನಡೆ' ಎಂದು ಸತೀಶನ್ ಟೀಕಿಸಿದ್ದಾರೆ.</p><p>'ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬಾರದಿತ್ತು. ಕಾರ್ಯಕ್ರಮವನ್ನು ಮುಂದೂಡುವಂತೆ ಹಾಗೂ ಸಿಎಂಗೆ ಮಾಹಿತಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು' ಎಂದೂ ಹೇಳಿದ್ದಾರೆ.</p><p>ಮುಖ್ಯಮಂತ್ರಿ ಅವರು ತೋರಿದ ಅಗೌರವದ ಬಗ್ಗೆ ನೋವು ತೋಡಿಕೊಂಡ ಸತೀಶನ್, ಆಕ್ಷೇಪವನ್ನೂ ವ್ಯಕ್ತಪಡಿಸಿದರು.</p>.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಭೂತಾನ್ ದೊರೆ ಜಿಗ್ಮ್ ಖೇಸರ್ ಭಾಗಿ.ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸರ್ಕಾರ ಜಾಗ ಮಂಜೂರು ಮಾಡಲಿದೆ: ಗೃಹ ಸಚಿವಾಲಯ.<p>ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಸಿಐಎಲ್) ವತಿಯಿಂದ ನಿರ್ಮಿಸಿರುವ ತಾಜ್ ಕೊಚ್ಚಿನ್ ಪಂಚತಾರಾ ಹೋಟೆಲ್ ಅನ್ನು ವಿಜಯನ್ ಅವರು ಇಂದು ಉದ್ಘಾಟಿಸಿದರು.</p><p>ಮನಹೋಹನ್ ಸಿಂಗ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯಲ್ಲಿ ಇಂದು ನೆರವೇರಿತು.</p><p>ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಅಂತಿಮ ಗೌರವ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಇಡೀ ರಾಷ್ಟ್ರವೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ದುಃಖದಲ್ಲಿರುವಾಗ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಟೀಕಿಸಿದೆ.</p><p>ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ವಿ.ಡಿ. ಸತೀಶನ್, ಮುಖ್ಯಮಂತ್ರಿಯವರು 'ಅಗೌರವ' ಹಾಗೂ 'ಅನುಚಿತ' ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ. </p><p>'ಹತ್ತು ವರ್ಷ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯುತ್ತಿರುವಾಗ, ಮುಖ್ಯಮಂತ್ರಿಯವರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಗೌರವ ಹಾಗೂ ಅನುಚಿತ ನಡೆ' ಎಂದು ಸತೀಶನ್ ಟೀಕಿಸಿದ್ದಾರೆ.</p><p>'ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬಾರದಿತ್ತು. ಕಾರ್ಯಕ್ರಮವನ್ನು ಮುಂದೂಡುವಂತೆ ಹಾಗೂ ಸಿಎಂಗೆ ಮಾಹಿತಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು' ಎಂದೂ ಹೇಳಿದ್ದಾರೆ.</p><p>ಮುಖ್ಯಮಂತ್ರಿ ಅವರು ತೋರಿದ ಅಗೌರವದ ಬಗ್ಗೆ ನೋವು ತೋಡಿಕೊಂಡ ಸತೀಶನ್, ಆಕ್ಷೇಪವನ್ನೂ ವ್ಯಕ್ತಪಡಿಸಿದರು.</p>.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಭೂತಾನ್ ದೊರೆ ಜಿಗ್ಮ್ ಖೇಸರ್ ಭಾಗಿ.ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸರ್ಕಾರ ಜಾಗ ಮಂಜೂರು ಮಾಡಲಿದೆ: ಗೃಹ ಸಚಿವಾಲಯ.<p>ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಸಿಐಎಲ್) ವತಿಯಿಂದ ನಿರ್ಮಿಸಿರುವ ತಾಜ್ ಕೊಚ್ಚಿನ್ ಪಂಚತಾರಾ ಹೋಟೆಲ್ ಅನ್ನು ವಿಜಯನ್ ಅವರು ಇಂದು ಉದ್ಘಾಟಿಸಿದರು.</p><p>ಮನಹೋಹನ್ ಸಿಂಗ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯಲ್ಲಿ ಇಂದು ನೆರವೇರಿತು.</p><p>ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಅಂತಿಮ ಗೌರವ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>