ದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣವೇ ಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಸೋಮವಾರ ಮೌನ ವ್ರತ ಆಚರಣೆ ಮಾಡಲಿದೆ.
ಸೋಮವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಜಭವನ ಅಥವಾ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಮೌನ ವ್ರತ ಆಚರಿಸುವಂತೆ ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಸೂಚನೆ ನೀಡಿದೆ.
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಅವರ ಮಗ ಸೇರಿದಂತೆ ಎಲ್ಲ ಆರೋಪಿಗಳನ್ನೂ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Lakhimpur Kheri violence | Congress asks chiefs of its state/UT units to observe maun vrat (vow of silence) between 10 am & 1 pm on Monday outside Raj Bhavans or Central Govt offices, demanding immediate sacking of Mos Home Ajay Mishra & arrest of all culprits including his son pic.twitter.com/qN9BB5kNrS