<p><strong>ಮುಂಬೈ: </strong>ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡರ ನಿಯೋಗವೊಂದು ಶನಿವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದು, ಮೈತ್ರಿ ಸರ್ಕಾಉದರದ ಕನಿಷ್ಠ ಸಾಮಾನ್ಯ ಕಾರ್ಯಕ್ರಮಗಳ (ಸಿಎಂಪಿ) ಅನುಷ್ಠಾನ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದೆ.</p>.<p class="bodytext">ಎಐಸಿಸಿ ಕಾರ್ಯದರ್ಶಿ ಎಚ್.ಕೆ.ಪಾಟೀಲ್ ನೇತೃತ್ವದ ನಿಯೋಗದಲ್ಲಿ ಎಂಪಿಸಿಸಿ ಅಧ್ಯಕ್ಷ ನಾನಾ ಪಟೊಲೆ, ಕಂದಾಯ ಸಚಿವ ಮತ್ತು ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ತೋರಟ್, ಸಚಿವ ಅಶೋಕ್ ಚವಾಣ್ ಅವರೂ ಇದ್ದರು.</p>.<p class="bodytext">ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಗುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆಯೇ ನಿಯೋಗದ ಭೇಟಿ ಗಮನಸೆಳೆದಿದೆ. ಇದು, ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿಯೂ ಆಗಿರುವ ಎಚ್.ಕೆ.ಪಾಟೀಲ್ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಣ ಮೊದಲ ಭೇಟಿಯೂ ಆಗಿದೆ.</p>.<p class="bodytext">ಮೈತ್ರಿ ಸರ್ಕಾರದ ಗೃಹ ಸಚಿವರ ವಿರುದ್ಧ ಮಾಜಿ ಪೊಲೀಸ್ ಕಮಿಷನರ್ ಅವರ ಭ್ರಷ್ಟಾಚಾರ ಆರೋಪ, ರಾಜ್ಯದಲ್ಲಿ ಕಾಣಿಸಿರುವ ಕೋವಿಡ್ ಎರಡನೇ ಅಲೆಯ ಚಿತ್ರಣದ ನಡುವೆ ಈ ಭೇಟಿ ನಡೆದಿದೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಸುಮಾರು ಒಂದು ಗಂಟೆ ಸಭೆ ನಡೆಯಿತು.</p>.<p class="bodytext">ಬುಡಕಟ್ಟು ಜನರು ಮತ್ತು ಬಡವರ ಕಲ್ಯಾಣ ಯೋಜನೆಗಳಿಗೆ ಅನುದಾನ ಬಿಡುಗಡೆ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಂದೆ ಬರೆದಿದ್ದ ಪತ್ರ ಹಾಗೂ ಅನುದಾನ ಹಂಚಿಕೆಯಲ್ಲಿ ಸಚಿವರ ನಡುವೆ ತಾರತಮ್ಯ ಆಗುತ್ತಿದೆ ಎಂಬ ಅಂಶವನ್ನು ಸಿ.ಎಂ ಗಮನಕ್ಕೆ ತಂದಿರುವುದಾಗಿತೋರಟ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡರ ನಿಯೋಗವೊಂದು ಶನಿವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದು, ಮೈತ್ರಿ ಸರ್ಕಾಉದರದ ಕನಿಷ್ಠ ಸಾಮಾನ್ಯ ಕಾರ್ಯಕ್ರಮಗಳ (ಸಿಎಂಪಿ) ಅನುಷ್ಠಾನ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದೆ.</p>.<p class="bodytext">ಎಐಸಿಸಿ ಕಾರ್ಯದರ್ಶಿ ಎಚ್.ಕೆ.ಪಾಟೀಲ್ ನೇತೃತ್ವದ ನಿಯೋಗದಲ್ಲಿ ಎಂಪಿಸಿಸಿ ಅಧ್ಯಕ್ಷ ನಾನಾ ಪಟೊಲೆ, ಕಂದಾಯ ಸಚಿವ ಮತ್ತು ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ತೋರಟ್, ಸಚಿವ ಅಶೋಕ್ ಚವಾಣ್ ಅವರೂ ಇದ್ದರು.</p>.<p class="bodytext">ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಗುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆಯೇ ನಿಯೋಗದ ಭೇಟಿ ಗಮನಸೆಳೆದಿದೆ. ಇದು, ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿಯೂ ಆಗಿರುವ ಎಚ್.ಕೆ.ಪಾಟೀಲ್ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಣ ಮೊದಲ ಭೇಟಿಯೂ ಆಗಿದೆ.</p>.<p class="bodytext">ಮೈತ್ರಿ ಸರ್ಕಾರದ ಗೃಹ ಸಚಿವರ ವಿರುದ್ಧ ಮಾಜಿ ಪೊಲೀಸ್ ಕಮಿಷನರ್ ಅವರ ಭ್ರಷ್ಟಾಚಾರ ಆರೋಪ, ರಾಜ್ಯದಲ್ಲಿ ಕಾಣಿಸಿರುವ ಕೋವಿಡ್ ಎರಡನೇ ಅಲೆಯ ಚಿತ್ರಣದ ನಡುವೆ ಈ ಭೇಟಿ ನಡೆದಿದೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಸುಮಾರು ಒಂದು ಗಂಟೆ ಸಭೆ ನಡೆಯಿತು.</p>.<p class="bodytext">ಬುಡಕಟ್ಟು ಜನರು ಮತ್ತು ಬಡವರ ಕಲ್ಯಾಣ ಯೋಜನೆಗಳಿಗೆ ಅನುದಾನ ಬಿಡುಗಡೆ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಂದೆ ಬರೆದಿದ್ದ ಪತ್ರ ಹಾಗೂ ಅನುದಾನ ಹಂಚಿಕೆಯಲ್ಲಿ ಸಚಿವರ ನಡುವೆ ತಾರತಮ್ಯ ಆಗುತ್ತಿದೆ ಎಂಬ ಅಂಶವನ್ನು ಸಿ.ಎಂ ಗಮನಕ್ಕೆ ತಂದಿರುವುದಾಗಿತೋರಟ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>