<p><strong>ನವದೆಹಲಿ:</strong> 'ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ. </p><p>ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ ಎಂದು ಹೇಳಿದೆ. </p><p>ಎಸ್ಐಆರ್ ನಡೆಯುತ್ತಿರುವ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಈ ಕುರಿತು ಮಾತನಾಡಿದ್ದಾರೆ. </p><p>'ಮತದಾರರ ಪಟ್ಟಿಯನ್ನು ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ' ಎಂದು ಅವರು ಪ್ರತಿಪಾದಿಸಿದ್ದಾರೆ. </p><p>'ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ವಿಶ್ವಾಸ ಕಂದುತ್ತಿರುವ ಈ ಸಮಯದಲ್ಲಿ ಎಸ್ಐಆರ್ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ' ಎಂದು ಅವರು ಹೇಳಿದ್ದಾರೆ. </p><p>'ಆಯೋಗವು ಆಡಳಿತದಲ್ಲಿರುವ ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾಬೀತುಪಡಿಸಬೇಕು. ದೇಶದ ಸಾಂವಿಧಾನಿಕ ಮತ್ತು ನಿಷ್ಠೆಯನ್ನು ಪ್ರದರ್ಶಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>'ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್ಐಆರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಅತ್ಯಂತ ಜಾಗರೂಕರಾಗಿರಬೇಕು. ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಮಾಡಲು ಬಿಡುವುದಿಲ್ಲ' ಎಂದು ಹೇಳಿದ್ದಾರೆ. </p>.SIR ಮುಂದೂಡಲು ಆಗ್ರಹ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ.Kerala SIR| BLO ಆತ್ಮಹತ್ಯೆ ಪ್ರಕರಣ; ಬಿಎಲ್ಒಗಳಿಂದ ಕೆಲಸ ಬಹಿಷ್ಕಾರ,ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ. </p><p>ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ ಎಂದು ಹೇಳಿದೆ. </p><p>ಎಸ್ಐಆರ್ ನಡೆಯುತ್ತಿರುವ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಈ ಕುರಿತು ಮಾತನಾಡಿದ್ದಾರೆ. </p><p>'ಮತದಾರರ ಪಟ್ಟಿಯನ್ನು ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ' ಎಂದು ಅವರು ಪ್ರತಿಪಾದಿಸಿದ್ದಾರೆ. </p><p>'ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ವಿಶ್ವಾಸ ಕಂದುತ್ತಿರುವ ಈ ಸಮಯದಲ್ಲಿ ಎಸ್ಐಆರ್ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ' ಎಂದು ಅವರು ಹೇಳಿದ್ದಾರೆ. </p><p>'ಆಯೋಗವು ಆಡಳಿತದಲ್ಲಿರುವ ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾಬೀತುಪಡಿಸಬೇಕು. ದೇಶದ ಸಾಂವಿಧಾನಿಕ ಮತ್ತು ನಿಷ್ಠೆಯನ್ನು ಪ್ರದರ್ಶಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>'ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್ಐಆರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಅತ್ಯಂತ ಜಾಗರೂಕರಾಗಿರಬೇಕು. ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಮಾಡಲು ಬಿಡುವುದಿಲ್ಲ' ಎಂದು ಹೇಳಿದ್ದಾರೆ. </p>.SIR ಮುಂದೂಡಲು ಆಗ್ರಹ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ.Kerala SIR| BLO ಆತ್ಮಹತ್ಯೆ ಪ್ರಕರಣ; ಬಿಎಲ್ಒಗಳಿಂದ ಕೆಲಸ ಬಹಿಷ್ಕಾರ,ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>