<p><strong>ನವದೆಹಲಿ:</strong> ಸಂಸತ್ತಿನ ಮುಂಗಾರು ಅಧಿವೇಶನದಲ್ಲೇ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಶಾಸನ ರಚಿಸಿ ಎಂದು ಕಾಂಗ್ರೆಸ್ ವರಿಷ್ಠರು ಆಗ್ರಹಿಸಿದ್ದಾರೆ.</p>.<p>ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತಂತೆ ಜಂಟಿ ಪತ್ರವನ್ನು ಬುಧವಾರ ಬರೆದಿದ್ದಾರೆ.</p>.<p>ಕೇಂದ್ರಾಡಳಿತ ಪ್ರದೇಶವಾದ ಲಡಾಕ್ ಅನ್ನು ಸಂವಿಧಾನದ ಆರನೇ ಶೆಡ್ಯೂಲ್ನಲ್ಲಿ ಸೇರ್ಪಡೆ ಮಾಡಲು ಶಾಸನ ರಚಿಸುವಂತೆಯೂ ಒತ್ತಾಯಿಸಿದ್ದಾರೆ. </p>.<p>‘ಐದು ವರ್ಷಗಳಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು–ಕಾಶ್ಮೀರದ ಜನರು ರಾಜ್ಯದ ಸ್ಥಾನಮಾನಕ್ಕಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಈ ಬೇಡಿಕೆಯು ನ್ಯಾಯಸಮ್ಮತವಾಗಿದೆ. ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವದ ಹಕ್ಕು ಆಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p><strong>ಸ್ವಾಗತ:</strong> ರಾಜ್ಯದ ಸ್ಥಾನಮಾನವನ್ನು ಮರಳಿ ಕೊಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರು ಪ್ರಧಾನಿಗೆ ಪತ್ರ ಬರೆದಿರುವುದನ್ನು ಜಮ್ಮು– ಕಾಶ್ಮೀರದ ಮುಖಂಡರು ಸ್ವಾಗತಿಸಿದ್ದಾರೆ.</p>.<p>‘ನಮಗೆ ನೀಡಿದ ಭರವಸೆ ಹೊರತುಪಡಿಸಿ ಬೇರೆ ಏನನ್ನೂ ಕೇಳುತ್ತಿಲ್ಲ’ ಎಂದಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.</p>.<p>ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಸಹ ರಾಜ್ಯದ ಸ್ಥಾನಮಾಕ್ಕೆ ಬೇಡಿಕೆ ಸಲ್ಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ತಿನ ಮುಂಗಾರು ಅಧಿವೇಶನದಲ್ಲೇ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಶಾಸನ ರಚಿಸಿ ಎಂದು ಕಾಂಗ್ರೆಸ್ ವರಿಷ್ಠರು ಆಗ್ರಹಿಸಿದ್ದಾರೆ.</p>.<p>ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತಂತೆ ಜಂಟಿ ಪತ್ರವನ್ನು ಬುಧವಾರ ಬರೆದಿದ್ದಾರೆ.</p>.<p>ಕೇಂದ್ರಾಡಳಿತ ಪ್ರದೇಶವಾದ ಲಡಾಕ್ ಅನ್ನು ಸಂವಿಧಾನದ ಆರನೇ ಶೆಡ್ಯೂಲ್ನಲ್ಲಿ ಸೇರ್ಪಡೆ ಮಾಡಲು ಶಾಸನ ರಚಿಸುವಂತೆಯೂ ಒತ್ತಾಯಿಸಿದ್ದಾರೆ. </p>.<p>‘ಐದು ವರ್ಷಗಳಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು–ಕಾಶ್ಮೀರದ ಜನರು ರಾಜ್ಯದ ಸ್ಥಾನಮಾನಕ್ಕಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಈ ಬೇಡಿಕೆಯು ನ್ಯಾಯಸಮ್ಮತವಾಗಿದೆ. ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವದ ಹಕ್ಕು ಆಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p><strong>ಸ್ವಾಗತ:</strong> ರಾಜ್ಯದ ಸ್ಥಾನಮಾನವನ್ನು ಮರಳಿ ಕೊಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರು ಪ್ರಧಾನಿಗೆ ಪತ್ರ ಬರೆದಿರುವುದನ್ನು ಜಮ್ಮು– ಕಾಶ್ಮೀರದ ಮುಖಂಡರು ಸ್ವಾಗತಿಸಿದ್ದಾರೆ.</p>.<p>‘ನಮಗೆ ನೀಡಿದ ಭರವಸೆ ಹೊರತುಪಡಿಸಿ ಬೇರೆ ಏನನ್ನೂ ಕೇಳುತ್ತಿಲ್ಲ’ ಎಂದಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.</p>.<p>ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಸಹ ರಾಜ್ಯದ ಸ್ಥಾನಮಾಕ್ಕೆ ಬೇಡಿಕೆ ಸಲ್ಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>