<p><strong>ಭುವನೇಶ್ವರ:</strong> ಒಡಿಶಾದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಶೇ.50ರಷ್ಟು ಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.</p><p>ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಕಾಂಗ್ರೆಸ್ ಬಹಳ ದಿನಗಳಿಂದ ಈ ಕುರಿತಾಗಿ ಒತ್ತಾಯಿಸುತ್ತಿದೆ. ಆದರೂ ವಿದ್ಯಾರ್ಥಿಗಳನ್ನು ಏಕೆ ಹೊರಗಿಡಲಾಗಿದೆ? ಎಂದು ಕಾಂಗ್ರೆಸ್ನ ಹಿರಿಯ ನಾಯಕ ನಿರಂಜನ್ ಪಟ್ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ. </p><p>ಒಡಿಶಾದ ಜನಸಂಖ್ಯೆಯಲ್ಲಿ ಮಹಿಳೆಯರು ಅರ್ಧದಷ್ಟಿರುವುದರಿಂದ, ಸರ್ಕಾರವು ಅವರಿಗೆ ಉನ್ನತ ಅಧ್ಯಯನದಲ್ಲಿ ಶೇ. 50 ರಷ್ಟು ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.</p><p>2026-27ರ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಎಸ್ಸಿ, ಎಸ್ಟಿ ಕೋಟಾವನ್ನು ಹೆಚ್ಚಿಸುವುದಾಗಿ ಹಾಗೂ ಸಾಮಾಜಿಕವಾಗಿ,ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹೊಸ ಕೋಟಾವನ್ನು ರಾಜ್ಯ ಸರ್ಕಾರ ಮಂಗಳವಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಶೇ.50ರಷ್ಟು ಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.</p><p>ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಕಾಂಗ್ರೆಸ್ ಬಹಳ ದಿನಗಳಿಂದ ಈ ಕುರಿತಾಗಿ ಒತ್ತಾಯಿಸುತ್ತಿದೆ. ಆದರೂ ವಿದ್ಯಾರ್ಥಿಗಳನ್ನು ಏಕೆ ಹೊರಗಿಡಲಾಗಿದೆ? ಎಂದು ಕಾಂಗ್ರೆಸ್ನ ಹಿರಿಯ ನಾಯಕ ನಿರಂಜನ್ ಪಟ್ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ. </p><p>ಒಡಿಶಾದ ಜನಸಂಖ್ಯೆಯಲ್ಲಿ ಮಹಿಳೆಯರು ಅರ್ಧದಷ್ಟಿರುವುದರಿಂದ, ಸರ್ಕಾರವು ಅವರಿಗೆ ಉನ್ನತ ಅಧ್ಯಯನದಲ್ಲಿ ಶೇ. 50 ರಷ್ಟು ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.</p><p>2026-27ರ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಎಸ್ಸಿ, ಎಸ್ಟಿ ಕೋಟಾವನ್ನು ಹೆಚ್ಚಿಸುವುದಾಗಿ ಹಾಗೂ ಸಾಮಾಜಿಕವಾಗಿ,ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹೊಸ ಕೋಟಾವನ್ನು ರಾಜ್ಯ ಸರ್ಕಾರ ಮಂಗಳವಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>