‘ಇಡೀ ದೇಶವು ಒಂದೇ ಧ್ವನಿಯಲ್ಲಿ ಮಾತನಾಡುವಾಗ ಮತ್ತು ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರೋತ್ಸಾಹಿಸಿ, ಪ್ರಶಂಸೆ ಮಾಡಬೇಕಾದ ಸಮಯದಲ್ಲಿ ಕಾಂಗ್ರೆಸ್ ಹಾಗೂ ಆ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಶಸ್ತ್ರ ಪಡೆಗಳ ನೈತಿಕತೆಯನ್ನು ಕುಸಿಯುವಂಥ ಮಾತುಗಳನ್ನಾಡುತ್ತಿದ್ದಾರೆ. ರಾಷ್ಟ್ರೀಯ ಭದ್ರತೆಯಂಥ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸದೇ, ಸಂಸತ್ತು ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕು’ ಎಂದೂ ಅವರು ಹೇಳಿದರು.