ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಕಾಂಗ್ರಾ ಕ್ಷೇತ್ರದಿಂದ, ಮಾಜಿ ಶಾಸಕ ಸತ್ಪಾಲ್ ರಾಯ್ಜಾದಾ ಅವರು ಹಮೀರ್ಪುರ್ ಲೋಕಸಭಾ ಕ್ಷೇತ್ರದಿಂದ, ಭೂಷಣ್ ಪಾಟೀಲ್ ಮುಂಬೈ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ. ಸತ್ಪಾಲ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಎದುರಿಸಲಿದ್ದಾರೆ.