<p><strong>ನವದೆಹಲಿ</strong>: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರನ್ನು ಉಪಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಮಂಗಳವಾರ ನಿರ್ಧರಿಸಿದೆ.</p>.<p>ಕಮಲೇಶ್ ಅವರು ದೆಹ್ರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.</p>.<p>ಮೂವರು ಪಕ್ಷೇತರ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.</p>.<p>ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪಕ್ಷೇತರ ಶಾಸಕ ಹೋಶಿಯಾರ್ ಸಿಂಗ್ ಅವರು ದೆಹ್ರಾ ಕ್ಷೇತ್ರದಿಂದ ಈಗ ಬಿಜೆಪಿ ಟಿಕೆಟ್ನಿಂದ ಸ್ಪರ್ಧಿಸುತ್ತಿದ್ದಾರೆ.</p>.<p>ದೆಹ್ರಾ ಕ್ಷೇತ್ರದಿಂದ ತಮ್ಮ ಪತ್ನಿಯನ್ನು ಕಣಕ್ಕಿಳಿಸಲು ಮುಖ್ಯಮಂತ್ತಿ ಸುಖು ಅವರಿಗೆ ಆಸಕ್ತಿ ಇರಲಿಲ್ಲ ಎಂದು ಮೂಲಗಳು ಹೇಳಿವೆ.</p>.<p>‘ಕಮಲೇಶ್ ಠಾಕೂರ್ ಅವರು ದೆಹ್ರಾ ಕ್ಷೇತ್ರದಲ್ಲಿ ಗೆಲ್ಲುವರು ಎಂಬುದಾಗಿ ಸಮೀಕ್ಷೆಯೊಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಅವರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ’ ಎಂದು ಇವೇ ಮೂಲಗಳು ಹೇಳಿವೆ.</p>.<p>2010ರಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆಯಾದ ನಂತರ, ಕಾಂಗ್ರೆಸ್ ಈ ಕ್ಷೇತ್ರದಿಂದ ಈ ವರೆಗೆ ಗೆದ್ದಿಲ್ಲ.</p>.<p>ಇನ್ನೊಂದೆಡೆ, ಪಕ್ಷದ ರಾಜ್ಯ ಮುಖಂಡ ರಾಜೇಶ್ ಶರ್ಮಾ ಅವರು ಸಹ ದೆಹ್ರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದರು.</p>.<p>ಉಪಚುನಾವಣೆ ನಡೆಯಲಿರುವ ಹಮೀರಪುರ ಕ್ಷೇತ್ರದಿಂದ ಪುಷ್ಪೇಂದ್ರ ವರ್ಮಾ ಹಾಗೂ ನಾಲಗಢದಿಂದ ಹರ್ದೀಪ್ ಸಿಂಗ್ ಬಾವಾ ಅವರನ್ನು ಕಣಕ್ಕಿಳಿಸುವ ಕುರಿತು ಸೋಮವಾರ ಘೋಷಣೆ ಮಾಡಿದ್ದ ಕಾಂಗ್ರೆಸ್, ದೆಹ್ರಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಮಾಹಿತಿ ಬಹಿರಂಗ ಪಡಿಸಿರಲಿಲ್ಲ. ಹೀಗಾಗಿ, ಈ ಕ್ಷೇತ್ರದಿಂದ ಮುಖ್ಯಮಂತ್ರಿ ಸುಖು ಪತ್ನಿ ಕಮಲೇಶ್ ಅವರನ್ನೇ ಕಣಕ್ಕಿಳಿಸಲಾಗುತ್ತದೆ ಎಂಬ ವದಂತಿಗೆ ಇದು ದಾರಿ ಮಾಡಿಕೊಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರನ್ನು ಉಪಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಮಂಗಳವಾರ ನಿರ್ಧರಿಸಿದೆ.</p>.<p>ಕಮಲೇಶ್ ಅವರು ದೆಹ್ರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.</p>.<p>ಮೂವರು ಪಕ್ಷೇತರ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.</p>.<p>ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪಕ್ಷೇತರ ಶಾಸಕ ಹೋಶಿಯಾರ್ ಸಿಂಗ್ ಅವರು ದೆಹ್ರಾ ಕ್ಷೇತ್ರದಿಂದ ಈಗ ಬಿಜೆಪಿ ಟಿಕೆಟ್ನಿಂದ ಸ್ಪರ್ಧಿಸುತ್ತಿದ್ದಾರೆ.</p>.<p>ದೆಹ್ರಾ ಕ್ಷೇತ್ರದಿಂದ ತಮ್ಮ ಪತ್ನಿಯನ್ನು ಕಣಕ್ಕಿಳಿಸಲು ಮುಖ್ಯಮಂತ್ತಿ ಸುಖು ಅವರಿಗೆ ಆಸಕ್ತಿ ಇರಲಿಲ್ಲ ಎಂದು ಮೂಲಗಳು ಹೇಳಿವೆ.</p>.<p>‘ಕಮಲೇಶ್ ಠಾಕೂರ್ ಅವರು ದೆಹ್ರಾ ಕ್ಷೇತ್ರದಲ್ಲಿ ಗೆಲ್ಲುವರು ಎಂಬುದಾಗಿ ಸಮೀಕ್ಷೆಯೊಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಅವರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ’ ಎಂದು ಇವೇ ಮೂಲಗಳು ಹೇಳಿವೆ.</p>.<p>2010ರಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆಯಾದ ನಂತರ, ಕಾಂಗ್ರೆಸ್ ಈ ಕ್ಷೇತ್ರದಿಂದ ಈ ವರೆಗೆ ಗೆದ್ದಿಲ್ಲ.</p>.<p>ಇನ್ನೊಂದೆಡೆ, ಪಕ್ಷದ ರಾಜ್ಯ ಮುಖಂಡ ರಾಜೇಶ್ ಶರ್ಮಾ ಅವರು ಸಹ ದೆಹ್ರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದರು.</p>.<p>ಉಪಚುನಾವಣೆ ನಡೆಯಲಿರುವ ಹಮೀರಪುರ ಕ್ಷೇತ್ರದಿಂದ ಪುಷ್ಪೇಂದ್ರ ವರ್ಮಾ ಹಾಗೂ ನಾಲಗಢದಿಂದ ಹರ್ದೀಪ್ ಸಿಂಗ್ ಬಾವಾ ಅವರನ್ನು ಕಣಕ್ಕಿಳಿಸುವ ಕುರಿತು ಸೋಮವಾರ ಘೋಷಣೆ ಮಾಡಿದ್ದ ಕಾಂಗ್ರೆಸ್, ದೆಹ್ರಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಮಾಹಿತಿ ಬಹಿರಂಗ ಪಡಿಸಿರಲಿಲ್ಲ. ಹೀಗಾಗಿ, ಈ ಕ್ಷೇತ್ರದಿಂದ ಮುಖ್ಯಮಂತ್ರಿ ಸುಖು ಪತ್ನಿ ಕಮಲೇಶ್ ಅವರನ್ನೇ ಕಣಕ್ಕಿಳಿಸಲಾಗುತ್ತದೆ ಎಂಬ ವದಂತಿಗೆ ಇದು ದಾರಿ ಮಾಡಿಕೊಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>