ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ ವೇಳೆ ಪಕ್ಷದ ಕಾರ್ಯಕರ್ತರಿಗೆ ಹಿಂದಿಯಲ್ಲಿ ವಿಡಿಯೊ ಸಂದೇಶ ನೀಡಿದ ಅವರು, ‘ಇತಿಹಾಸವನ್ನು ತಿರುಚಿ ಸುಳ್ಳು ಹೇಳಲಾಗುತ್ತಿದೆ. ದೇಶದ ‘ಗಂಗಾ-ಜಮುನಾ’ ಪರಂಪರೆಯನ್ನು ಅಳಿಸುವಂಥ ನೀಚ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ದೇಶದ ಸಾಮಾನ್ಯ ನಾಗರಿಕರು ಅಸುರಕ್ಷತೆ ಮತ್ತು ಭಯ ಅನುಭವಿಸುತ್ತಿದ್ದು, ದೇಶದಲ್ಲಿ ಸರ್ವಾಧಿಕಾರದ ಆಳ್ವಿಕೆ ಇದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ಧಕ್ಕೆ ತರಲಾಗುತ್ತಿದೆ’ ಎಂದು ದೂರಿದ್ದಾರೆ.