<p><strong>ಖಜುರಾಹೊ:</strong> ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಹಿಂದೂ ಮತ್ತು ಮುಸ್ಲಿಮರನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಆರೋಪಿಸಿದ್ದಾರೆ.</p>.<p>ಚಾಂಡ್ಲಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭವ್ಯವಾದ ರಾಮಮಂದಿರ ದೇವಾಲಯ ಈಗ ನಿರ್ಮಾಣಗೊಂಡಿದೆ. ಆದರೆ, ಇದನ್ನು 1947ರಲ್ಲಿಯೇ ನಿರ್ಮಾಣ ಮಾಡಬಹುದಿತ್ತು’ ಎಂದು ತಿಳಿಸಿದ್ದಾರೆ.</p><p>ಜನವರಿ 22ರಂದು ನಡೆದ ಬಾಲ ರಾಮ ಪ್ರಾಣಪ್ರತಿಷ್ಠಾಪನೆಯ ಆಹ್ವಾನವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್ ದೇವರಿಗೆ ಅಗೌರವ ತೋರಿದೆ. ಇಂತಹ ಕೃತ್ಯ ಎಸಗಿದವರಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಯಾದವ್ ಹೇಳಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಭಾರತದ ಸಂಸ್ಕೃತಿಯ ಪತಾಕೆ ಎತ್ತರದಲ್ಲಿ ಹಾರುತ್ತಿದೆ. ಮೋದಿಯವರ ಜನಪ್ರಿಯತೆ ಎಷ್ಟಿದೆ ಅಂದರೆ, ಪಾಕ್ ಆಕ್ರಮಿತ ಕಾಶ್ಮೀರದ ಜನರು ಕೂಡ ಪ್ರಧಾನಿ ಅವರನ್ನು ಇಷ್ಟಪಡಲಾರಂಭಿಸಿದ್ದಾರೆ ಎಂದು ಯಾದವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಜುರಾಹೊ:</strong> ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಹಿಂದೂ ಮತ್ತು ಮುಸ್ಲಿಮರನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಆರೋಪಿಸಿದ್ದಾರೆ.</p>.<p>ಚಾಂಡ್ಲಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭವ್ಯವಾದ ರಾಮಮಂದಿರ ದೇವಾಲಯ ಈಗ ನಿರ್ಮಾಣಗೊಂಡಿದೆ. ಆದರೆ, ಇದನ್ನು 1947ರಲ್ಲಿಯೇ ನಿರ್ಮಾಣ ಮಾಡಬಹುದಿತ್ತು’ ಎಂದು ತಿಳಿಸಿದ್ದಾರೆ.</p><p>ಜನವರಿ 22ರಂದು ನಡೆದ ಬಾಲ ರಾಮ ಪ್ರಾಣಪ್ರತಿಷ್ಠಾಪನೆಯ ಆಹ್ವಾನವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್ ದೇವರಿಗೆ ಅಗೌರವ ತೋರಿದೆ. ಇಂತಹ ಕೃತ್ಯ ಎಸಗಿದವರಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಯಾದವ್ ಹೇಳಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಭಾರತದ ಸಂಸ್ಕೃತಿಯ ಪತಾಕೆ ಎತ್ತರದಲ್ಲಿ ಹಾರುತ್ತಿದೆ. ಮೋದಿಯವರ ಜನಪ್ರಿಯತೆ ಎಷ್ಟಿದೆ ಅಂದರೆ, ಪಾಕ್ ಆಕ್ರಮಿತ ಕಾಶ್ಮೀರದ ಜನರು ಕೂಡ ಪ್ರಧಾನಿ ಅವರನ್ನು ಇಷ್ಟಪಡಲಾರಂಭಿಸಿದ್ದಾರೆ ಎಂದು ಯಾದವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>