<p><strong>ನವದೆಹಲಿ</strong>: ಕೇರಳ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ನ ಉನ್ನತ ನಾಯಕರು ಕೇರಳ ರಾಜ್ಯ ಘಟಕದ ನಾಯಕರೊಂದಿಗೆ ಶುಕ್ರವಾರ ಇಲ್ಲಿ ಮಹತ್ವದ ಸಭೆ ನಡೆಸಿದರು. ಸಂಸದ ಶಶಿ ತರೂರ್ ಅವರು ಸಭೆಗೆ ಗೈರಾದರು.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡರು.</p>.<p class="title">ಪಕ್ಷದ ರಾಜ್ಯ ಘಟಕದ ನಾಯಕರು ತಮ್ಮನ್ನು ಪದೇ ಪದೇ ಕಡೆಗಣಿಸಲು ಪ್ರಯತ್ನಿಸಿರುವುದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ತರೂರ್ ಸಭೆಯಿಂದ ಹೊರಗುಳಿದರು ಎಂದು ಮೂಲಗಳು ತಿಳಿಸಿವೆ.</p>.<p class="title">ಜನವರಿ 19ರಂದು ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಕೇರಳದ ಇತರ ನಾಯಕರ ಹೆಸರು ಉಲ್ಲೇಖಿಸಿದ್ದರು. ಆದರೆ ವೇದಿಕೆಯಲ್ಲಿದ್ದ ತರೂರ್ ಅವರ ಹೆಸರನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರಲಿಲ್ಲ. ಈ ಬೆಳವಣಿಗೆಯಿಂದಲೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p class="title">ಆದರೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂಬ ವರದಿಯನ್ನು ಕಾಂಗ್ರೆಸ್ ಅಲ್ಲಗಳೆದಿದೆ. ‘ಕೋಯಿಕ್ಕೋಡ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದರಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ತರೂರ್ ಅವರ ಕಚೇರಿ ತಿಳಿಸಿದೆ ಎಂದಿದೆ. </p>.<p class="title">ಪಕ್ಷದ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಶಿ, ಕೇರಳ ಚುನಾವಣೆ ಉಸ್ತುವಾರಿಗಳಾದ ಸಚಿನ್ ಪೈಲಟ್ ಮತ್ತು ಕೆ.ಜೆ ಜಾರ್ಜ್, ಹಿರಿಯ ನಾಯಕರಾದ ರಮೇಶ್ ಚೆನ್ನಿತ್ತಲ, ವಿ.ಡಿ.ಸತೀಶನ್ ಮತ್ತು ಸನ್ನಿ ಜೋಸೆಫ್ ಅವರು ಸಭೆಯಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇರಳ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ನ ಉನ್ನತ ನಾಯಕರು ಕೇರಳ ರಾಜ್ಯ ಘಟಕದ ನಾಯಕರೊಂದಿಗೆ ಶುಕ್ರವಾರ ಇಲ್ಲಿ ಮಹತ್ವದ ಸಭೆ ನಡೆಸಿದರು. ಸಂಸದ ಶಶಿ ತರೂರ್ ಅವರು ಸಭೆಗೆ ಗೈರಾದರು.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡರು.</p>.<p class="title">ಪಕ್ಷದ ರಾಜ್ಯ ಘಟಕದ ನಾಯಕರು ತಮ್ಮನ್ನು ಪದೇ ಪದೇ ಕಡೆಗಣಿಸಲು ಪ್ರಯತ್ನಿಸಿರುವುದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ತರೂರ್ ಸಭೆಯಿಂದ ಹೊರಗುಳಿದರು ಎಂದು ಮೂಲಗಳು ತಿಳಿಸಿವೆ.</p>.<p class="title">ಜನವರಿ 19ರಂದು ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಕೇರಳದ ಇತರ ನಾಯಕರ ಹೆಸರು ಉಲ್ಲೇಖಿಸಿದ್ದರು. ಆದರೆ ವೇದಿಕೆಯಲ್ಲಿದ್ದ ತರೂರ್ ಅವರ ಹೆಸರನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರಲಿಲ್ಲ. ಈ ಬೆಳವಣಿಗೆಯಿಂದಲೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p class="title">ಆದರೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂಬ ವರದಿಯನ್ನು ಕಾಂಗ್ರೆಸ್ ಅಲ್ಲಗಳೆದಿದೆ. ‘ಕೋಯಿಕ್ಕೋಡ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದರಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ತರೂರ್ ಅವರ ಕಚೇರಿ ತಿಳಿಸಿದೆ ಎಂದಿದೆ. </p>.<p class="title">ಪಕ್ಷದ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಶಿ, ಕೇರಳ ಚುನಾವಣೆ ಉಸ್ತುವಾರಿಗಳಾದ ಸಚಿನ್ ಪೈಲಟ್ ಮತ್ತು ಕೆ.ಜೆ ಜಾರ್ಜ್, ಹಿರಿಯ ನಾಯಕರಾದ ರಮೇಶ್ ಚೆನ್ನಿತ್ತಲ, ವಿ.ಡಿ.ಸತೀಶನ್ ಮತ್ತು ಸನ್ನಿ ಜೋಸೆಫ್ ಅವರು ಸಭೆಯಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>