ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತ ಮಾತೆಯ ರಕ್ಷಣೆಗೆ ಸದಾ ಸಿದ್ಧವೆಂದು ಹೇಳುತ್ತದೆ. ಆದರೆ, ರಕ್ಷಣೆಯ ಬಗ್ಗೆ ಕೇವಲ ವಾಕ್ಚಾತುರ್ಯ ಪ್ರದರ್ಶಿಸಿದರೆ ಸಾಲದು. ಭಾರತ–ಚೀನಾ ಗಡಿ ಭಾಗದಲ್ಲಿ ಶಾಂತಿ ಮರುಸ್ಥಾಪಿಸಲು ಯಾವಾಗ ಕ್ರಮಕೈಗೊಳ್ಳುತ್ತೀರಿ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.