<p><strong>ನವದೆಹಲಿ: </strong>ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲೇ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಶುಕ್ರವಾರ ಅಭಿಯಾನ ಆರಂಭಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಜನರು ದನಿಯೆತ್ತಬೇಕು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕೊರೊನಾ ಮತ್ತು ದೇಶದ ಹಲವೆಡೆ ಪ್ರವಾಹ ಉಂಟಾಗಿರುವುದರಿಂದ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಆಗ್ರಹಿಸಿವೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈಗಾಗಲೇ ನಿಗದಿಪಡಿಸಿದಂತೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ಇತ್ತೀಚೆಗೆ ಸ್ಪಷ್ಟಪಡಿಸಿತ್ತು.</p>.<p>ಪಕ್ಷದ ಅಭಿಯಾನದ ಭಾಗವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ತೊಂದರೆಗೀಡಾಗಿರುವ ಲಕ್ಷಾಂತರ ವಿದ್ಯಾರ್ಥಿಗಳ ಪರ ದನಿಯೆತ್ತಿ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಾತನಾಡಿ. ಸರ್ಕಾರವು ವಿದ್ಯಾರ್ಥಿಗಳ ಮಾತು ಕೇಳುವಂತೆ ಮಾಡೋಣ’ ಎಂದು ಉಲ್ಲೇಖಿಸಿದ್ದಾರೆ.</p>.<p>‘ಸರ್ಕಾರದ ವೈಫಲ್ಯಗಳಿಂದಾಗಿ ನೀಟ್, ಜೆಇಇ ಅಭ್ಯರ್ಥಿಗಳ ಸುರಕ್ಷತೆಯ ಬಗ್ಗೆ ರಾಜಿ ಮಾಡಿಕೊಳ್ಳಲಾಗದು. ಸರ್ಕಾರವು ಎಲ್ಲ ಬಂಡವಾಳದಾರರ ಮಾತುಗಳನ್ನೂ ಆಲಿಸಬೇಕು. ಒಮ್ಮತಕ್ಕೆ ಬರಬೇಕು’ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲೇ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಶುಕ್ರವಾರ ಅಭಿಯಾನ ಆರಂಭಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಜನರು ದನಿಯೆತ್ತಬೇಕು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕೊರೊನಾ ಮತ್ತು ದೇಶದ ಹಲವೆಡೆ ಪ್ರವಾಹ ಉಂಟಾಗಿರುವುದರಿಂದ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಆಗ್ರಹಿಸಿವೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈಗಾಗಲೇ ನಿಗದಿಪಡಿಸಿದಂತೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ಇತ್ತೀಚೆಗೆ ಸ್ಪಷ್ಟಪಡಿಸಿತ್ತು.</p>.<p>ಪಕ್ಷದ ಅಭಿಯಾನದ ಭಾಗವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ತೊಂದರೆಗೀಡಾಗಿರುವ ಲಕ್ಷಾಂತರ ವಿದ್ಯಾರ್ಥಿಗಳ ಪರ ದನಿಯೆತ್ತಿ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಾತನಾಡಿ. ಸರ್ಕಾರವು ವಿದ್ಯಾರ್ಥಿಗಳ ಮಾತು ಕೇಳುವಂತೆ ಮಾಡೋಣ’ ಎಂದು ಉಲ್ಲೇಖಿಸಿದ್ದಾರೆ.</p>.<p>‘ಸರ್ಕಾರದ ವೈಫಲ್ಯಗಳಿಂದಾಗಿ ನೀಟ್, ಜೆಇಇ ಅಭ್ಯರ್ಥಿಗಳ ಸುರಕ್ಷತೆಯ ಬಗ್ಗೆ ರಾಜಿ ಮಾಡಿಕೊಳ್ಳಲಾಗದು. ಸರ್ಕಾರವು ಎಲ್ಲ ಬಂಡವಾಳದಾರರ ಮಾತುಗಳನ್ನೂ ಆಲಿಸಬೇಕು. ಒಮ್ಮತಕ್ಕೆ ಬರಬೇಕು’ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>