<p><strong>ಇಂದೋರ್(ಮಧ್ಯಪ್ರದೇಶ)</strong>:ಸಚಿವ ವಿಜಯ್ ಶಾ ಅವರು ನಾಪತ್ತೆಯಾಗಿದ್ದಾರೆ ಎಂದು ಹೇಳುವ ಭಿತ್ತಿಪತ್ರಗಳನ್ನು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಕಾಂಗ್ರೆಸ್ ಮುಖಂಡ ವಿವೇಕ್ ಖಂಡೇಲ್ವಾಲ್ ವಿವಿಧೆಡೆ ಅಂಟಿಸಿದ್ದಾರೆ. </p><p>‘ನಾಪತ್ತೆಯಾದ ವ್ಯಕ್ತಿಯ ಶೋಧ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಈ ಭಿತ್ತಿಪತ್ರ ಅಂಟಿಸಲಾಗಿದೆ. ಸಚಿವರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹11 ಸಾವಿರ ನೀಡಲಾಗುತ್ತದೆ ಎಂದು ಖಂಡೇಲ್ವಾಲ್ ಹೇಳಿದ್ದಾರೆ.</p><p>‘ಶಾ ಅವರು ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಂಪುಟ ಸಭೆಗಳಿಗೂ ಅವರು ಬರುತ್ತಿಲ್ಲ. ಹೀಗಾಗಿ ಭಿತ್ತಿಪತ್ರ ಅಂಟಿಸಿದ್ದೇವೆ’ ಎಂದು ಖಂಡೇಲ್ವಾಲ್ ಹೇಳಿದ್ದಾರೆ. ವಿಜಯ್ ಶಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವವರೆಗೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.</p><p>ಮೇ 12ರಂದು ಇಂದೋರ್ನ ಮೌವ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಮಾತನಾಡಿದ್ದ ವಿಜಯ್ ಶಾ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂದು ಕರೆದು ವಿವಾದ ಸೃಷ್ಟಿಸಿದ್ದರು.</p><p>ಶಾ ಹೇಳಿಕೆ ಸಂಬಂಧಪಟ್ಟಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಮಧ್ಯಪ್ರದೇಶ ಹೈಕೋರ್ಟ್, ಎಫ್ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಕೂಡ ಶಾ ಅವರಿಗೆ ಛೀಮಾರಿ ಹಾಕಿದ್ದು, ಎಸ್ಐಟಿ ತನಿಖೆಗೆ ಆದೇಶಿಸಿತ್ತು.</p><p>ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಮಧ್ಯಪ್ರದೇಶದ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಐಜಿಪಿ ಪ್ರಮೋದ್ ವರ್ಮಾ, ಡಿಐಜಿ ಕಲ್ಯಾಣ್ ಚಕ್ರವರ್ತಿ ಮತ್ತು ಎಸ್ಪಿ ವಾಹಿನಿ ಸಿಂಗ್ ಅವರು ಈ ತಂಡದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್(ಮಧ್ಯಪ್ರದೇಶ)</strong>:ಸಚಿವ ವಿಜಯ್ ಶಾ ಅವರು ನಾಪತ್ತೆಯಾಗಿದ್ದಾರೆ ಎಂದು ಹೇಳುವ ಭಿತ್ತಿಪತ್ರಗಳನ್ನು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಕಾಂಗ್ರೆಸ್ ಮುಖಂಡ ವಿವೇಕ್ ಖಂಡೇಲ್ವಾಲ್ ವಿವಿಧೆಡೆ ಅಂಟಿಸಿದ್ದಾರೆ. </p><p>‘ನಾಪತ್ತೆಯಾದ ವ್ಯಕ್ತಿಯ ಶೋಧ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಈ ಭಿತ್ತಿಪತ್ರ ಅಂಟಿಸಲಾಗಿದೆ. ಸಚಿವರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹11 ಸಾವಿರ ನೀಡಲಾಗುತ್ತದೆ ಎಂದು ಖಂಡೇಲ್ವಾಲ್ ಹೇಳಿದ್ದಾರೆ.</p><p>‘ಶಾ ಅವರು ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಂಪುಟ ಸಭೆಗಳಿಗೂ ಅವರು ಬರುತ್ತಿಲ್ಲ. ಹೀಗಾಗಿ ಭಿತ್ತಿಪತ್ರ ಅಂಟಿಸಿದ್ದೇವೆ’ ಎಂದು ಖಂಡೇಲ್ವಾಲ್ ಹೇಳಿದ್ದಾರೆ. ವಿಜಯ್ ಶಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವವರೆಗೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.</p><p>ಮೇ 12ರಂದು ಇಂದೋರ್ನ ಮೌವ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಮಾತನಾಡಿದ್ದ ವಿಜಯ್ ಶಾ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂದು ಕರೆದು ವಿವಾದ ಸೃಷ್ಟಿಸಿದ್ದರು.</p><p>ಶಾ ಹೇಳಿಕೆ ಸಂಬಂಧಪಟ್ಟಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಮಧ್ಯಪ್ರದೇಶ ಹೈಕೋರ್ಟ್, ಎಫ್ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಕೂಡ ಶಾ ಅವರಿಗೆ ಛೀಮಾರಿ ಹಾಕಿದ್ದು, ಎಸ್ಐಟಿ ತನಿಖೆಗೆ ಆದೇಶಿಸಿತ್ತು.</p><p>ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಮಧ್ಯಪ್ರದೇಶದ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಐಜಿಪಿ ಪ್ರಮೋದ್ ವರ್ಮಾ, ಡಿಐಜಿ ಕಲ್ಯಾಣ್ ಚಕ್ರವರ್ತಿ ಮತ್ತು ಎಸ್ಪಿ ವಾಹಿನಿ ಸಿಂಗ್ ಅವರು ಈ ತಂಡದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>