ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ.
ಇದೇ ವೇಳೆ ಅವರುರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಅವರ ಸ್ಮಾರಕಗಳಿಗೂ ಗೌರವ ಅರ್ಪಿಸಿದ್ದಾರೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತ್ ಜೋಡೊ ಯಾತ್ರೆಗೂ ಮುನ್ನರಾಹುಲ್ ಗಾಂಧಿ ಅವರು ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ಚರಣ್ ಸಿಂಗ್, ಚರಣ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಹಾಗೂ ಜಗಜೀವನ್ ರಾಮ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು ಎಂದು ತಿಳಿಸಿದ್ದಾರೆ.
ರಾಹುಲ್ ಶನಿವಾರವೇ ಈ ಸ್ಮಾರಕ ಗಳಿಗೆ ಭೇಟಿ ನೀಡಬೇಕಿತ್ತು. ಭಾರತ್ ಜೋಡೊ ಯಾತ್ರೆ ತಡವಾಗಿ ಮುಕ್ತಾಯವಾಗಿದ್ದರಿಂದ ಸಾಧ್ಯವಾಗಿರಲಿಲ್ಲ.
राहुल गांधी ने आज सुबह #भारत_जोड़ो_यात्रा की भावना के अनुरूप गांधी जी, जवाहरलाल नेहरू, लाल बहादुर शास्त्री, इंदिरा गांधी, चरण सिंह, राजीव गांधी, अटल बिहारी वाजपेयी और जगजीवन राम के समाधि स्थलों पर श्रद्धासुमन अर्पित किए। pic.twitter.com/0Zinyj63ko