<p><strong>ನವದೆಹಲಿ:</strong> ಪಾಕಿಸ್ತಾನ– ಚೀನಾ ದೇಶಗಳ ಸವಾಲುಗಳನ್ನು ಎದುರಿಸಲು ಸಮಗ್ರ ರಾಷ್ಟ್ರೀಯ ಮಿಲಿಟರಿ ಸಿದ್ಧಾಂತ ರೂಪಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಸೋಮವಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಪಾಕಿಸ್ತಾನ ವಿರುದ್ಧದ ಸಂಘರ್ಷದಲ್ಲಿ ದೇಶದ ಸಶಸ್ತ್ರ ಪಡೆಗಳು ಮೇಲುಗೈ ಸಾಧಿಸುತ್ತಿದ್ದ ವೇಳೆಯಲ್ಲಿ ‘ಆಪರೇಷನ್ ಸಿಂಧೂರ’ ಅನ್ನು ದಿಢೀರನೆ ನಿಲ್ಲಿಸಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ನಿರ್ಧಾರದಿಂದ ಸಾಧಿಸಲಾದ ಕಾರ್ಯತಂತ್ರ, ಸೇನೆ ಮತ್ತು ರಾಜಕೀಯ ಗುರಿಗಳ ಕುರಿತು ವಿವರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಕದನ ವಿರಾಮ ಒಪ್ಪಂದದ ಚೌಕಟ್ಟು ಮತ್ತು ನಿಯಮಗಳು ಯಾವುವು ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು’ ಎಂದೂ ಅವರು ಕೇಳಿದ್ದಾರೆ.</p>.<p>‘ಪಾಕಿಸ್ತಾನ ಭಯೋತ್ಪಾದಕ ರಾಷ್ಟ ಎಂಬುದು ಸಂಪೂರ್ಣವಾಗಿ ಸ್ಥಾಪಿತವಾದ ಸತ್ಯ. ಆದರೂ ಮೋದಿ ಸರ್ಕಾರ ಪಾಕಿಸ್ತಾನದ ಜತೆಗಿನ ಬಿಕ್ಕಟ್ಟಿನ ವಿಷಯದಲ್ಲಿ ಅಮೆರಿಕಕ್ಕೆ ಏಕೆ ಅವಕಾಶ ನೀಡುತ್ತಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ಯುಪಿಎ ವಿಚಾರಗಳಾದ ‘ಮೌಂಟೇನ್ ಸ್ಟ್ರೈಕ್ ಕಾರ್ಪ್ಸ್’ ಮತ್ತು ‘ಮಾನವರಹಿತ ವೈಮಾನಿಕ ವ್ಯವಸ್ಥೆಗಳು (ಯುಎಎಸ್) ಮತ್ತು ಡ್ರೋನ್ ಕಾರ್ಪ್ಸ್’ ಕಾರ್ಯರೂಪಕ್ಕೆ ತರುವಂತೆ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನ– ಚೀನಾ ದೇಶಗಳ ಸವಾಲುಗಳನ್ನು ಎದುರಿಸಲು ಸಮಗ್ರ ರಾಷ್ಟ್ರೀಯ ಮಿಲಿಟರಿ ಸಿದ್ಧಾಂತ ರೂಪಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಸೋಮವಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಪಾಕಿಸ್ತಾನ ವಿರುದ್ಧದ ಸಂಘರ್ಷದಲ್ಲಿ ದೇಶದ ಸಶಸ್ತ್ರ ಪಡೆಗಳು ಮೇಲುಗೈ ಸಾಧಿಸುತ್ತಿದ್ದ ವೇಳೆಯಲ್ಲಿ ‘ಆಪರೇಷನ್ ಸಿಂಧೂರ’ ಅನ್ನು ದಿಢೀರನೆ ನಿಲ್ಲಿಸಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ನಿರ್ಧಾರದಿಂದ ಸಾಧಿಸಲಾದ ಕಾರ್ಯತಂತ್ರ, ಸೇನೆ ಮತ್ತು ರಾಜಕೀಯ ಗುರಿಗಳ ಕುರಿತು ವಿವರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಕದನ ವಿರಾಮ ಒಪ್ಪಂದದ ಚೌಕಟ್ಟು ಮತ್ತು ನಿಯಮಗಳು ಯಾವುವು ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು’ ಎಂದೂ ಅವರು ಕೇಳಿದ್ದಾರೆ.</p>.<p>‘ಪಾಕಿಸ್ತಾನ ಭಯೋತ್ಪಾದಕ ರಾಷ್ಟ ಎಂಬುದು ಸಂಪೂರ್ಣವಾಗಿ ಸ್ಥಾಪಿತವಾದ ಸತ್ಯ. ಆದರೂ ಮೋದಿ ಸರ್ಕಾರ ಪಾಕಿಸ್ತಾನದ ಜತೆಗಿನ ಬಿಕ್ಕಟ್ಟಿನ ವಿಷಯದಲ್ಲಿ ಅಮೆರಿಕಕ್ಕೆ ಏಕೆ ಅವಕಾಶ ನೀಡುತ್ತಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ಯುಪಿಎ ವಿಚಾರಗಳಾದ ‘ಮೌಂಟೇನ್ ಸ್ಟ್ರೈಕ್ ಕಾರ್ಪ್ಸ್’ ಮತ್ತು ‘ಮಾನವರಹಿತ ವೈಮಾನಿಕ ವ್ಯವಸ್ಥೆಗಳು (ಯುಎಎಸ್) ಮತ್ತು ಡ್ರೋನ್ ಕಾರ್ಪ್ಸ್’ ಕಾರ್ಯರೂಪಕ್ಕೆ ತರುವಂತೆ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>