<p><strong>ತಿರುವನಂತಪುರ</strong>: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಬ್ಬರಲ್ಲಿ, ಒಬ್ಬರು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷದಿಂದ ಆಯ್ಕೆಯಾಗಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ಅಭಿಪ್ರಾಯ ಪಟ್ಟಿದ್ದಾರೆ.</p><p>ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷ ಘೋಷಿಸಬಹುದು. ಈ ಮೂಲಕ ಖರ್ಗೆ ದಲಿತ ಸಮುದಾಯದಲ್ಲಿ ಮೊದಲ ಪ್ರಧಾನಿಯಾಗಬಹುದು. ಅಥವಾ ಕಾಂಗ್ರೆಸ್ ಪಕ್ಷವನ್ನು ಉತ್ತಮವಾಗಿ ಆಡಳಿತ ನಡೆಸಿಕೊಂಡು ಬಂದಿರುವ ಗಾಂಧಿ ಕುಟುಂಬದ ಉತ್ತರಾಧಿಕಾರಿಯಾಗಿ ರಾಹುಲ್ ಮುಂದುವರೆಯಬಹುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.</p><p>ಪ್ರಧಾನಿಯಾದವರು ಎಲ್ಲರನ್ನೂ ಸಮಾನವಾಗಿ ಕಾಣುವುದು ಮುಖ್ಯ. ಪಕ್ಷದಿಂದ ಆಯ್ಕೆಯಾಗುವ ಅಭ್ಯರ್ಥಿಯು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಬ್ಬರಲ್ಲಿ, ಒಬ್ಬರು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷದಿಂದ ಆಯ್ಕೆಯಾಗಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ಅಭಿಪ್ರಾಯ ಪಟ್ಟಿದ್ದಾರೆ.</p><p>ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷ ಘೋಷಿಸಬಹುದು. ಈ ಮೂಲಕ ಖರ್ಗೆ ದಲಿತ ಸಮುದಾಯದಲ್ಲಿ ಮೊದಲ ಪ್ರಧಾನಿಯಾಗಬಹುದು. ಅಥವಾ ಕಾಂಗ್ರೆಸ್ ಪಕ್ಷವನ್ನು ಉತ್ತಮವಾಗಿ ಆಡಳಿತ ನಡೆಸಿಕೊಂಡು ಬಂದಿರುವ ಗಾಂಧಿ ಕುಟುಂಬದ ಉತ್ತರಾಧಿಕಾರಿಯಾಗಿ ರಾಹುಲ್ ಮುಂದುವರೆಯಬಹುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.</p><p>ಪ್ರಧಾನಿಯಾದವರು ಎಲ್ಲರನ್ನೂ ಸಮಾನವಾಗಿ ಕಾಣುವುದು ಮುಖ್ಯ. ಪಕ್ಷದಿಂದ ಆಯ್ಕೆಯಾಗುವ ಅಭ್ಯರ್ಥಿಯು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>