<p><strong>ಜೈಪುರ:</strong> ಸಭೆಯೊಂದರಲ್ಲಿ ಪಕ್ಷದ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ವಾಗ್ದಂಡನೆ ವಿಧಿಸಿದ ಆರೋಪದಲ್ಲಿ ನಾಯಕಿ ಆರಾಧನಾ ಮಿಶ್ರಾ ಅವರು ವಿವಾದಕ್ಕೊಳಗಾಗಿದ್ದಾರೆ.</p>.<p>ಘಟನೆಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ‘ಕಾಂಗ್ರೆಸ್ಗೆ ಈ ದೇಶದ ಬಗ್ಗೆಯಾಗಲೀ, ಸಾಂವಿಧಾನಿಕ ಸಂಸ್ಥೆಗಳ ಬಗ್ಗೆಯಾಗಲೀ ಗೌರವವಿಲ್ಲ. ‘ಭಾರತ್ ಮಾತಾ ಕಿ ಜೈ’ ಘೋಷಣೆ ಕುರಿತು ಏಕೆ ದ್ವೇಷ’ ಎಂದು ಪ್ರಶ್ನಿಸಿದ್ದಾರೆ.</p>.<p>ರಾಜಸ್ಥಾನ ಬಿಜೆಪಿಯ ಯುವಘಟಕವು ಕಾಂಗ್ರೆಸ್ ವಿರುದ್ಧ ಬುಧವಾರ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. </p>.<p>ರಾಜಸ್ಥಾನದಲ್ಲಿ ಕಾಂಗ್ರೆಸ್ನ ಚುನಾವಣಾ ವೀಕ್ಷಕರಾಗಿರುವ ಆರಾಧನಾ ಮಿಶ್ರಾ ಅವರು, ‘ಈ ಘಟನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾವುದೇ ಅಭ್ಯರ್ಥಿಯ ಪರವಾಗಿ ಘೋಷಣೆ ಕೂಗದಂತೆ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೆ’ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ವಕ್ತಾರ ಸ್ವರ್ಣಿಮ್ ಚರ್ತುರ್ವೇದಿ ಅವರು, ‘ಮಿಶ್ರಾ ಅವರು ಭಾರತ್ ಕಿ ಜೈ ಘೋಷಣೆ ಕೂಗುವುದನ್ನು ತಡೆದಿಲ್ಲ’ ಎಂದೂ ಪ್ರತಿಪಾದಿಸಿದ್ದಾರೆ. </p>.<p>ಘಟನೆಯ ವಿವರ: ಜೈಪುರದ ಆದರ್ಶ ನಗರ ಬ್ಲಾಕ್ನಲ್ಲಿ ಸೋಮವಾರ ರಾಜಸ್ಥಾನದ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜೈಪುರ ವಿಭಾಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಅಭ್ಯರ್ಥಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಅಲ್ಲಿ ಚುನಾವಣಾ ವೀಕ್ಷಕರಾಗಿ ಆಗಮಿಸಿದ್ದ ಆರಾಧನಾ ಮಿಶ್ರಾ ಅವರು ಯಾವೊಬ್ಬ ಅಭ್ಯರ್ಥಿಯ ಪರವಾಗಿ ಘೋಷಣೆ ಕೂಗದಂತೆ ತಾಕೀತು ಮಾಡಿದ್ದರು. </p>.<p>ಆಗ ಕಾಂಗ್ರೆಸ್ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದರು. ಮಧ್ಯ ಪ್ರವೇಶಿಸಿದ ಮಿಶ್ರಾ ಅವರು ‘ನಿಮಗೆ ಘೋಷಣೆ ಕೂಗುವ ಅಭಿಮಾನವಿದ್ದರೆ ಕಾಂಗ್ರೆಸ್ ಜಿಂದಾಬಾದ್ ಎಂದು ಘೋಷಣೆ ಕೂಗಿ’ ಎಂದು ಹೇಳಿದ್ದರು. </p>.<p>ಈ ಸಂಬಂಧ ಹರಿದಾಡುತ್ತಿರುವ ವಿಡಿಯೊವೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಭೆಯ ಮಧ್ಯೆ ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಿರುವುದು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಸಭೆಯೊಂದರಲ್ಲಿ ಪಕ್ಷದ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ವಾಗ್ದಂಡನೆ ವಿಧಿಸಿದ ಆರೋಪದಲ್ಲಿ ನಾಯಕಿ ಆರಾಧನಾ ಮಿಶ್ರಾ ಅವರು ವಿವಾದಕ್ಕೊಳಗಾಗಿದ್ದಾರೆ.</p>.<p>ಘಟನೆಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ‘ಕಾಂಗ್ರೆಸ್ಗೆ ಈ ದೇಶದ ಬಗ್ಗೆಯಾಗಲೀ, ಸಾಂವಿಧಾನಿಕ ಸಂಸ್ಥೆಗಳ ಬಗ್ಗೆಯಾಗಲೀ ಗೌರವವಿಲ್ಲ. ‘ಭಾರತ್ ಮಾತಾ ಕಿ ಜೈ’ ಘೋಷಣೆ ಕುರಿತು ಏಕೆ ದ್ವೇಷ’ ಎಂದು ಪ್ರಶ್ನಿಸಿದ್ದಾರೆ.</p>.<p>ರಾಜಸ್ಥಾನ ಬಿಜೆಪಿಯ ಯುವಘಟಕವು ಕಾಂಗ್ರೆಸ್ ವಿರುದ್ಧ ಬುಧವಾರ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. </p>.<p>ರಾಜಸ್ಥಾನದಲ್ಲಿ ಕಾಂಗ್ರೆಸ್ನ ಚುನಾವಣಾ ವೀಕ್ಷಕರಾಗಿರುವ ಆರಾಧನಾ ಮಿಶ್ರಾ ಅವರು, ‘ಈ ಘಟನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾವುದೇ ಅಭ್ಯರ್ಥಿಯ ಪರವಾಗಿ ಘೋಷಣೆ ಕೂಗದಂತೆ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೆ’ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ವಕ್ತಾರ ಸ್ವರ್ಣಿಮ್ ಚರ್ತುರ್ವೇದಿ ಅವರು, ‘ಮಿಶ್ರಾ ಅವರು ಭಾರತ್ ಕಿ ಜೈ ಘೋಷಣೆ ಕೂಗುವುದನ್ನು ತಡೆದಿಲ್ಲ’ ಎಂದೂ ಪ್ರತಿಪಾದಿಸಿದ್ದಾರೆ. </p>.<p>ಘಟನೆಯ ವಿವರ: ಜೈಪುರದ ಆದರ್ಶ ನಗರ ಬ್ಲಾಕ್ನಲ್ಲಿ ಸೋಮವಾರ ರಾಜಸ್ಥಾನದ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜೈಪುರ ವಿಭಾಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಅಭ್ಯರ್ಥಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಅಲ್ಲಿ ಚುನಾವಣಾ ವೀಕ್ಷಕರಾಗಿ ಆಗಮಿಸಿದ್ದ ಆರಾಧನಾ ಮಿಶ್ರಾ ಅವರು ಯಾವೊಬ್ಬ ಅಭ್ಯರ್ಥಿಯ ಪರವಾಗಿ ಘೋಷಣೆ ಕೂಗದಂತೆ ತಾಕೀತು ಮಾಡಿದ್ದರು. </p>.<p>ಆಗ ಕಾಂಗ್ರೆಸ್ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದರು. ಮಧ್ಯ ಪ್ರವೇಶಿಸಿದ ಮಿಶ್ರಾ ಅವರು ‘ನಿಮಗೆ ಘೋಷಣೆ ಕೂಗುವ ಅಭಿಮಾನವಿದ್ದರೆ ಕಾಂಗ್ರೆಸ್ ಜಿಂದಾಬಾದ್ ಎಂದು ಘೋಷಣೆ ಕೂಗಿ’ ಎಂದು ಹೇಳಿದ್ದರು. </p>.<p>ಈ ಸಂಬಂಧ ಹರಿದಾಡುತ್ತಿರುವ ವಿಡಿಯೊವೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಭೆಯ ಮಧ್ಯೆ ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಿರುವುದು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>