<p><strong>ತಿರುವನಂತಪುರ</strong>: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಹಾನಿಯಾಗಿದ್ದರೂ ಕೇರಳದ ಕಾಂಗ್ರೆಸ್ ನಾಯಕರು, ತರೂರ್ ಪರವಾಗಿ ಮೃದು ಧೋರಣೆ ತಾಳಿದ್ದಾರೆ.</p><p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ‘ಟೀಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿ ಪಕ್ಷವು ಯಾರನ್ನೂ ಮೂಲೆಗುಂಪು ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷವು ಟೀಕೆಗಳನ್ನು ಧನಾತ್ಮಕವಾಗಿ ಪರಿಗಣಿಸುತ್ತದೆ’ ಎಂದು ಹೇಳಿದ್ದಾರೆ.</p><p>ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಚೆನ್ನಿತ್ತಲ ಅವರು, ‘ತರೂರ್ ಅವರು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡುವ ಮುನ್ನವೇ ಸಂದರ್ಶನ ನಡೆದಿತ್ತು’ ಎಂದು ಸಮರ್ಥಿಸಿಕೊಂಡಿದ್ದಾರೆ.</p><p>ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಸನ್ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಸುಧಾಕರನ್ ಅವರು, ‘ತರೂರ್ ಅವರು ತಮ್ಮ ಮಿತಿಯನ್ನು ಮೀರುವುದಿಲ್ಲ’ ಎಂದು ಭಾವಿಸುತ್ತೇನೆ ಎಂದಿದ್ದಾರೆ.</p><p>ತರೂರ್ ಅವರ ಹೇಳಿಕೆಯನ್ನು ನಿರ್ಲಕ್ಷಿಸಲು ಅಥವಾ ತರೂರ್ ಅವರಿಗೆ ಪುನಃ ಪ್ರಚೋದನೆ ನೀಡದಿರಲು ರಾಜ್ಯದ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.</p><p>ತರೂರ್ ಅವರ ವಿರುದ್ಧದ ಯಾವುದೇ ರೀತಿಯ ಕ್ರಮವು ಗಾಯದ ಮೇಲೆ ಉಪ್ಪು ಸುರಿದಂತೆ ಆಗುತ್ತದೆ. ಹೀಗಾಗಿ ಪಕ್ಷವು ತಟಸ್ಥ ಧೋರಣೆ ತಾಳಿದೆ ಎಂದು ಮೂಲಗಳು ತಿಳಿಸಿವೆ.</p><p>ಕೇರಳದ ಕಾಂಗ್ರೆಸ್ ಘಟಕದಲ್ಲಿ ‘ನಾಯಕರ ಕೊರತೆ ಇದೆ’ ಎಂದು ತರೂರ್ ಅವರು ಇತ್ತೀಚೆಗೆ ಸಂದರ್ಶನದಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಹಾನಿಯಾಗಿದ್ದರೂ ಕೇರಳದ ಕಾಂಗ್ರೆಸ್ ನಾಯಕರು, ತರೂರ್ ಪರವಾಗಿ ಮೃದು ಧೋರಣೆ ತಾಳಿದ್ದಾರೆ.</p><p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ‘ಟೀಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿ ಪಕ್ಷವು ಯಾರನ್ನೂ ಮೂಲೆಗುಂಪು ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷವು ಟೀಕೆಗಳನ್ನು ಧನಾತ್ಮಕವಾಗಿ ಪರಿಗಣಿಸುತ್ತದೆ’ ಎಂದು ಹೇಳಿದ್ದಾರೆ.</p><p>ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಚೆನ್ನಿತ್ತಲ ಅವರು, ‘ತರೂರ್ ಅವರು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡುವ ಮುನ್ನವೇ ಸಂದರ್ಶನ ನಡೆದಿತ್ತು’ ಎಂದು ಸಮರ್ಥಿಸಿಕೊಂಡಿದ್ದಾರೆ.</p><p>ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಸನ್ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಸುಧಾಕರನ್ ಅವರು, ‘ತರೂರ್ ಅವರು ತಮ್ಮ ಮಿತಿಯನ್ನು ಮೀರುವುದಿಲ್ಲ’ ಎಂದು ಭಾವಿಸುತ್ತೇನೆ ಎಂದಿದ್ದಾರೆ.</p><p>ತರೂರ್ ಅವರ ಹೇಳಿಕೆಯನ್ನು ನಿರ್ಲಕ್ಷಿಸಲು ಅಥವಾ ತರೂರ್ ಅವರಿಗೆ ಪುನಃ ಪ್ರಚೋದನೆ ನೀಡದಿರಲು ರಾಜ್ಯದ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.</p><p>ತರೂರ್ ಅವರ ವಿರುದ್ಧದ ಯಾವುದೇ ರೀತಿಯ ಕ್ರಮವು ಗಾಯದ ಮೇಲೆ ಉಪ್ಪು ಸುರಿದಂತೆ ಆಗುತ್ತದೆ. ಹೀಗಾಗಿ ಪಕ್ಷವು ತಟಸ್ಥ ಧೋರಣೆ ತಾಳಿದೆ ಎಂದು ಮೂಲಗಳು ತಿಳಿಸಿವೆ.</p><p>ಕೇರಳದ ಕಾಂಗ್ರೆಸ್ ಘಟಕದಲ್ಲಿ ‘ನಾಯಕರ ಕೊರತೆ ಇದೆ’ ಎಂದು ತರೂರ್ ಅವರು ಇತ್ತೀಚೆಗೆ ಸಂದರ್ಶನದಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>