‘ಭಯೋತ್ಪಾದನೆ ನಕ್ಸಲಿಸಂ ನಿರ್ಮೂಲನೆ’
ಪೋರಬಂದರ್: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾದರೆ ಭಯೋತ್ಪಾದನೆ ಮತ್ತು ನಕ್ಸಲಿಸಂಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಇಲ್ಲಿ ಹೇಳಿದರು. ಪೋರಬಂದರ್ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿ ‘ಕಾಶ್ಮೀರದಲ್ಲಿ ಕಳೆದ ಐದು ವರ್ಷಗಳಲ್ಲಿ ಕಲ್ಲು ತೂರಾಟ ನಡೆಸುವ ಧೈರ್ಯವನ್ನು ಯಾರೂ ತೋರಿಲ್ಲ. ಮೋದಿ ಅವರು ಭಯೋತ್ಪಾದನೆಯನ್ನು ತೊಲಗಿಸಲು ಪಣ ತೊಟ್ಟಿದ್ದಾರೆ’ ಎಂದರು.