<p><strong>ನವದೆಹಲಿ</strong>: ಗಂಭೀರ ಆರೋಪ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿರುವ ಸರ್ಕಾರದ ಉನ್ನತ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವ ಮೂರು ಮಸೂದೆಗಳ ಪರಿಶೀಲನೆಗೆ ರಚನೆಯಾಗಿರುವ ‘ಜಂಟಿ ಸಂಸದೀಯ ಸಮಿತಿ’ಯಿಂದ ಕಾಂಗ್ರೆಸ್ ಪಕ್ಷವು ಹೊರಗುಳಿಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಪಕ್ಷದ ನಿರ್ಣಯವನ್ನು ಲೋಕಸಭೆಯಲ್ಲಿ ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ಅವು ತಿಳಿಸಿವೆ.</p>.<p>ಟಿಎಂಸಿ, ಎಎಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳು ಸಮಿತಿಯಿಂದ ಹೊರಗುಳಿಯುವುದಾಗಿ ಈಗಾಗಲೇ ತಿಳಿಸಿವೆ. ಸಮಾಜವಾದಿ ಪಕ್ಷವು ಸಮಿತಿಯಿಂದ ದೂರ ಇರುವ ಸುಳಿವು ನೀಡಿದೆ. ಕೆಲವು ವಿರೋಧ ಪಕ್ಷಗಳು ಸಾರ್ವಜನಿಕವಾಗಿ ಯಾವುದೇ ಅಭಿಪ್ರಾಯವನ್ನು ಪ್ರಕಟಿಸಿಲ್ಲ. ಆದರೆ ಸಮಿತಿಯನ್ನು ಸೇರುವ ಇಂಗಿತ ವ್ಯಕ್ತಪಡಿಸಿವೆ.</p>.<p>ಸಮಿತಿಯನ್ನು ಬಹಿಷ್ಕರಿಸುವ ಬಗ್ಗೆ ಯಾವುದೇ ರಾಜಕೀಯ ಪಕ್ಷವು ಲಿಖಿತ ಅಭಿಪ್ರಾಯವನ್ನು ಸಲ್ಲಿಸಿಲ್ಲ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಇದಕ್ಕೂ ಮುನ್ನ ತಿಳಿಸಿದ್ದಾರೆ.</p>.<p>ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಪದಚ್ಯುತಿಗೊಳಿಸಲಿಕ್ಕೆ ಈ ಮಸೂದೆಯು ಅನುವು ಮಾಡಿಕೊಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗಂಭೀರ ಆರೋಪ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿರುವ ಸರ್ಕಾರದ ಉನ್ನತ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವ ಮೂರು ಮಸೂದೆಗಳ ಪರಿಶೀಲನೆಗೆ ರಚನೆಯಾಗಿರುವ ‘ಜಂಟಿ ಸಂಸದೀಯ ಸಮಿತಿ’ಯಿಂದ ಕಾಂಗ್ರೆಸ್ ಪಕ್ಷವು ಹೊರಗುಳಿಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಪಕ್ಷದ ನಿರ್ಣಯವನ್ನು ಲೋಕಸಭೆಯಲ್ಲಿ ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ಅವು ತಿಳಿಸಿವೆ.</p>.<p>ಟಿಎಂಸಿ, ಎಎಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳು ಸಮಿತಿಯಿಂದ ಹೊರಗುಳಿಯುವುದಾಗಿ ಈಗಾಗಲೇ ತಿಳಿಸಿವೆ. ಸಮಾಜವಾದಿ ಪಕ್ಷವು ಸಮಿತಿಯಿಂದ ದೂರ ಇರುವ ಸುಳಿವು ನೀಡಿದೆ. ಕೆಲವು ವಿರೋಧ ಪಕ್ಷಗಳು ಸಾರ್ವಜನಿಕವಾಗಿ ಯಾವುದೇ ಅಭಿಪ್ರಾಯವನ್ನು ಪ್ರಕಟಿಸಿಲ್ಲ. ಆದರೆ ಸಮಿತಿಯನ್ನು ಸೇರುವ ಇಂಗಿತ ವ್ಯಕ್ತಪಡಿಸಿವೆ.</p>.<p>ಸಮಿತಿಯನ್ನು ಬಹಿಷ್ಕರಿಸುವ ಬಗ್ಗೆ ಯಾವುದೇ ರಾಜಕೀಯ ಪಕ್ಷವು ಲಿಖಿತ ಅಭಿಪ್ರಾಯವನ್ನು ಸಲ್ಲಿಸಿಲ್ಲ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಇದಕ್ಕೂ ಮುನ್ನ ತಿಳಿಸಿದ್ದಾರೆ.</p>.<p>ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಪದಚ್ಯುತಿಗೊಳಿಸಲಿಕ್ಕೆ ಈ ಮಸೂದೆಯು ಅನುವು ಮಾಡಿಕೊಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>