<p><strong>ನವದೆಹಲಿ</strong>: ವಂದೇ ಮಾತರಂ ಮತ್ತು ಚುನಾವಣಾ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಸಂಸದರು ತೋರಿದ ಕಾರ್ಯವೈಖರಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ಲಾಘಿಸಿದರು.</p>.<p>ಶುಕ್ರವಾರ ನಡೆದ ಕಾಂಗ್ರೆಸ್ನ ಲೋಕಸಭಾ ಸದಸ್ಯರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಅವರು ಸಂಸದರ ಅಭಿಪ್ರಾಯಗಳನ್ನು ಆಲಿಸಿದರು.</p>.<p>ಚರ್ಚೆಗೆ ಕೈಗೆತ್ತಿಕೊಂಡ ಎರಡೂ ವಿಷಯಗಳಲ್ಲಿ ಸರ್ಕಾರವು ಪ್ರತಿಪಕ್ಷಗಳಿಂದ ‘ಒತ್ತಡಕ್ಕೆ ಸಿಲುಕಿದೆ’ ಎಂದು ರಾಹುಲ್ ಅವರು ಸಭೆಯಲ್ಲಿ ಪಕ್ಷದ ಸಂಸದರಿಗೆ ಹೇಳಿದರು ಎಂದು ಮೂಲಗಳು ತಿಳಿಸಿವೆ.</p>.<p>ಸಭೆಯ ಬಳಿಕ ಸಂಸತ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಂದೇ ಮಾತರಂ ಮತ್ತು ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಕುರಿತು ಕಾವೇರಿದ ಚರ್ಚೆ ನಡೆಯಿತು. ಎರಡೂ ಚರ್ಚೆಗಳಲ್ಲಿ ನಾವು ಅವರ (ಸರ್ಕಾರದ) ಸಂಕಥನವನ್ನು ಪುಡಿಗಟ್ಟಿದ್ದೇವೆ’ ಎಂದರು.</p>.<p>ಎಸ್ಐಆರ್ ಚರ್ಚೆಯ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೊಂದಲಕ್ಕೀಡಾಗಿದ್ದರಲ್ಲದೆ, ಸಂಸತ್ತಿನಲ್ಲಿ ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂದು ಟೀಕಿಸಿದರು.</p>.<p>‘ಇಡೀ ವ್ಯವಸ್ಥೆಯು ಮತಕಳವಿನಲ್ಲಿ ತೊಡಗಿಕೊಂಡಿದೆ. ಈ ವಿಷಯ ಇದೀಗ ದೇಶದ ಎಲ್ಲರಿಗೂ ತಿಳಿದಿದೆ. ಇದೇ ಕಾರಣದಿಂದ ಅಮಿತ್ ಶಾ ಅವರು ಮಾನಸಿಕವಾಗಿ ಒತ್ತಡಕ್ಕೆ ಸಿಲುಕಿದ್ದರು’ ಎಂದರು.</p>.<p>ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪ ನಾಯಕ ಗೌರವ್ ಗೊಗೊಯ್ ಮಾತನಾಡಿ, ‘ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ವಾಯು ಮಾಲಿನ್ಯ ಮತ್ತು ಕಾರ್ಮಿಕ ಸಂಹಿತೆಯಂತಹ ಪ್ರಸ್ತುತ ವಿಷಯಗಳನ್ನು ಸಂಸತ್ತಿನಲ್ಲಿ ಎತ್ತುವಲ್ಲಿ ಪಕ್ಷವು ಯಶಸ್ವಿಯಾಗಿದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು’ ಎಂದು ಹೇಳಿದರು.</p>.<p><strong>ವಾಯುಮಾಲಿನ್ಯ: ಚರ್ಚೆಗೆ ಆಗ್ರಹ</strong></p><p>ದೇಶದಾದ್ಯಂತ ಪ್ರಮುಖ ನಗರಗಳನ್ನು ವಿಷಪೂರಿತ ಗಾಳಿಯು ಆವರಿಸಿಕೊಂಡಿದೆ ಎಂದು ಹೇಳಿರುವ ರಾಹುಲ್ ಗಾಂಧಿ ವಾಯುಮಾಲಿನ್ಯ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.</p><p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷಗಳು ಪರಸ್ಪರ ಮಾತಿನ ಚಕಮಕಿ ನಡೆಸುವ ಬದಲು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಚರ್ಚೆಯನ್ನು ರೂಪಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.</p><p>‘ನಾವು ಈ ಗಂಭೀರ ವಿಷಯದ ಬಗ್ಗೆ ಸಂಸತ್ತಿನಲ್ಲಿ ವಿಸ್ತೃತ ಚರ್ಚೆ ನಡೆಸಬೇಕು. ಪ್ರತಿ ನಗರದಲ್ಲೂ ಮುಂದಿನ 5 ಅಥವಾ 10 ವರ್ಷಗಳಲ್ಲಿ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುವಂತಹ ವಾತಾವರಣ ನಿರ್ಮಿಸಲು ವ್ಯವಸ್ಥಿತ ಯೋಜನೆಯನ್ನು ಜಾರಿಗೆ ತರಬೇಕು’ ಎಂದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ವಿಷಯದ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಾಗಿದೆ. ಲೋಕಸಭೆಯ ಕಲಾಪ ಸಲಹಾ ಸಮಿತಿಯು ಚರ್ಚೆಗೆ ಸಮಯವನ್ನು ನಿಗದಿಪಡಿಸಬಹುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಂದೇ ಮಾತರಂ ಮತ್ತು ಚುನಾವಣಾ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಸಂಸದರು ತೋರಿದ ಕಾರ್ಯವೈಖರಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ಲಾಘಿಸಿದರು.</p>.<p>ಶುಕ್ರವಾರ ನಡೆದ ಕಾಂಗ್ರೆಸ್ನ ಲೋಕಸಭಾ ಸದಸ್ಯರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಅವರು ಸಂಸದರ ಅಭಿಪ್ರಾಯಗಳನ್ನು ಆಲಿಸಿದರು.</p>.<p>ಚರ್ಚೆಗೆ ಕೈಗೆತ್ತಿಕೊಂಡ ಎರಡೂ ವಿಷಯಗಳಲ್ಲಿ ಸರ್ಕಾರವು ಪ್ರತಿಪಕ್ಷಗಳಿಂದ ‘ಒತ್ತಡಕ್ಕೆ ಸಿಲುಕಿದೆ’ ಎಂದು ರಾಹುಲ್ ಅವರು ಸಭೆಯಲ್ಲಿ ಪಕ್ಷದ ಸಂಸದರಿಗೆ ಹೇಳಿದರು ಎಂದು ಮೂಲಗಳು ತಿಳಿಸಿವೆ.</p>.<p>ಸಭೆಯ ಬಳಿಕ ಸಂಸತ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಂದೇ ಮಾತರಂ ಮತ್ತು ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಕುರಿತು ಕಾವೇರಿದ ಚರ್ಚೆ ನಡೆಯಿತು. ಎರಡೂ ಚರ್ಚೆಗಳಲ್ಲಿ ನಾವು ಅವರ (ಸರ್ಕಾರದ) ಸಂಕಥನವನ್ನು ಪುಡಿಗಟ್ಟಿದ್ದೇವೆ’ ಎಂದರು.</p>.<p>ಎಸ್ಐಆರ್ ಚರ್ಚೆಯ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೊಂದಲಕ್ಕೀಡಾಗಿದ್ದರಲ್ಲದೆ, ಸಂಸತ್ತಿನಲ್ಲಿ ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂದು ಟೀಕಿಸಿದರು.</p>.<p>‘ಇಡೀ ವ್ಯವಸ್ಥೆಯು ಮತಕಳವಿನಲ್ಲಿ ತೊಡಗಿಕೊಂಡಿದೆ. ಈ ವಿಷಯ ಇದೀಗ ದೇಶದ ಎಲ್ಲರಿಗೂ ತಿಳಿದಿದೆ. ಇದೇ ಕಾರಣದಿಂದ ಅಮಿತ್ ಶಾ ಅವರು ಮಾನಸಿಕವಾಗಿ ಒತ್ತಡಕ್ಕೆ ಸಿಲುಕಿದ್ದರು’ ಎಂದರು.</p>.<p>ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪ ನಾಯಕ ಗೌರವ್ ಗೊಗೊಯ್ ಮಾತನಾಡಿ, ‘ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ವಾಯು ಮಾಲಿನ್ಯ ಮತ್ತು ಕಾರ್ಮಿಕ ಸಂಹಿತೆಯಂತಹ ಪ್ರಸ್ತುತ ವಿಷಯಗಳನ್ನು ಸಂಸತ್ತಿನಲ್ಲಿ ಎತ್ತುವಲ್ಲಿ ಪಕ್ಷವು ಯಶಸ್ವಿಯಾಗಿದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು’ ಎಂದು ಹೇಳಿದರು.</p>.<p><strong>ವಾಯುಮಾಲಿನ್ಯ: ಚರ್ಚೆಗೆ ಆಗ್ರಹ</strong></p><p>ದೇಶದಾದ್ಯಂತ ಪ್ರಮುಖ ನಗರಗಳನ್ನು ವಿಷಪೂರಿತ ಗಾಳಿಯು ಆವರಿಸಿಕೊಂಡಿದೆ ಎಂದು ಹೇಳಿರುವ ರಾಹುಲ್ ಗಾಂಧಿ ವಾಯುಮಾಲಿನ್ಯ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.</p><p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷಗಳು ಪರಸ್ಪರ ಮಾತಿನ ಚಕಮಕಿ ನಡೆಸುವ ಬದಲು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಚರ್ಚೆಯನ್ನು ರೂಪಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.</p><p>‘ನಾವು ಈ ಗಂಭೀರ ವಿಷಯದ ಬಗ್ಗೆ ಸಂಸತ್ತಿನಲ್ಲಿ ವಿಸ್ತೃತ ಚರ್ಚೆ ನಡೆಸಬೇಕು. ಪ್ರತಿ ನಗರದಲ್ಲೂ ಮುಂದಿನ 5 ಅಥವಾ 10 ವರ್ಷಗಳಲ್ಲಿ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುವಂತಹ ವಾತಾವರಣ ನಿರ್ಮಿಸಲು ವ್ಯವಸ್ಥಿತ ಯೋಜನೆಯನ್ನು ಜಾರಿಗೆ ತರಬೇಕು’ ಎಂದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ವಿಷಯದ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಾಗಿದೆ. ಲೋಕಸಭೆಯ ಕಲಾಪ ಸಲಹಾ ಸಮಿತಿಯು ಚರ್ಚೆಗೆ ಸಮಯವನ್ನು ನಿಗದಿಪಡಿಸಬಹುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>