ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆಗೆ ಮುಂದಾದ ರಾಹುಲ್‌

Last Updated 25 ಜೂನ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ಕುರಿತು ಚರ್ಚಿಸಲು ಒಂದೆರಡು ದಿನಗಳಲ್ಲಿ ಭೇಟಿ ಮಾಡಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ದೆಹಲಿ, ಹರಿಯಾಣ, ಮಹಾರಾಷ್ಟ್ರ ಘಟಕಗಳ ಮುಖಂಡರಿಗೆ ಸೂಚಿಸಿದ್ದಾರೆ.

ಈ ಬೆಳವಣಿಗೆ ಅವರು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದರ ಸೂಚನೆ ಎಂದೇ ಮುಖಂಡರು ಭಾವಿಸಿದ್ದಾರೆ. ಇತ್ತೀಚೆಗಷ್ಟೇ ಕರ್ನಾಟಕ, ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕಗಳನ್ನು ಬರ್ಖಾಸ್ತು ಮಾಡಲಾಗಿದೆ. ಇತರರಾಜ್ಯಗಳಲ್ಲಿಯೂ ಇಂಥದೇ ಕ್ರಮ ನಿರೀಕ್ಷಿಸಲಾಗಿತ್ತು. ಈಗ, ಚುನಾವಣೆ ನಡೆಯಲಿರುವ ರಾಜ್ಯಗಳತ್ತ ರಾಹುಲ್‌ ತಮ್ಮ ಗಮನ ಕೇಂದ್ರೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT