<p><strong>ಭೋಪಾಲ್</strong>: ‘ಅತ್ಯಾಚಾರ ನಡೆಯಲು ಮಹಿಳೆಯರ ಸೌಂದರ್ಯವೇ ಕಾರಣ’ ಎಂದು ಮಧ್ಯಪ್ರದೇಶದ ಭಂದೇರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಫೂಲ್ ಸಿಂಹ ಬರೈಯಾ ಹೇಳಿಕೆ ನೀಡಿದ್ದು, ಭಾರಿ ವಿವಾದ ಸೃಷ್ಟಿಸಿದೆ.</p>.<p>‘ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯಗಳ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದರೆ, ತೀರ್ಥಯಾತ್ರೆ ಮಾಡಿದ ಫಲ ಸಿಗುತ್ತದೆ ಎಂದು ಧರ್ಮ ಗ್ರಂಥದಲ್ಲಿ ಉಲ್ಲೇಖಿಸಿರುವುದಿಂದ ಆ ರೀತಿ ಅತ್ಯಾಚಾರವೆಸಗಲಾಗುತ್ತಿದೆ’ ಎಂದು ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದೋರ್ಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಫೂಲ್ ಸಿಂಹ ಅವರು ನೀಡಿದ ಹೇಳಿಕೆಯು ಮುನ್ನೆಲೆಗೆ ಬಂದಿದೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.</p>.<h2>ಮುಖ್ಯಮಂತ್ರಿ ಖಂಡನೆ:</h2><p> ‘ರಾಹುಲ್ ಗಾಂಧಿ ಅವರು ಇಂದೋರ್ಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಕಾಂಗ್ರೆಸ್ ಶಾಸಕರೊಬ್ಬರು ಸಮಾಜದಲ್ಲಿ ದ್ವೇಷ ಹರಡುತ್ತಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತಿಳಿಸಿದ್ದಾರೆ.</p>.<p>‘ಶಾಸಕ ಫೂಲ್ ಸಿಂಹ ಅವರನ್ನು ಪಕ್ಷದಿಂದ ಹೊರಹಾಕುತ್ತಾರೆ ಎಂದು ಭಾವಿಸುತ್ತೇನೆ. ಆಗ ಮಾತ್ರ ಸಮಾಜದಲ್ಲಿರುವ ಎಲ್ಲ ಸಮುದಾಯಗಳ ಬಗ್ಗೆ ಅವರಿಗೆ ಗೌರವವಿದೆ ಎಂದು ನಂಬುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ‘ಅತ್ಯಾಚಾರ ನಡೆಯಲು ಮಹಿಳೆಯರ ಸೌಂದರ್ಯವೇ ಕಾರಣ’ ಎಂದು ಮಧ್ಯಪ್ರದೇಶದ ಭಂದೇರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಫೂಲ್ ಸಿಂಹ ಬರೈಯಾ ಹೇಳಿಕೆ ನೀಡಿದ್ದು, ಭಾರಿ ವಿವಾದ ಸೃಷ್ಟಿಸಿದೆ.</p>.<p>‘ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯಗಳ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದರೆ, ತೀರ್ಥಯಾತ್ರೆ ಮಾಡಿದ ಫಲ ಸಿಗುತ್ತದೆ ಎಂದು ಧರ್ಮ ಗ್ರಂಥದಲ್ಲಿ ಉಲ್ಲೇಖಿಸಿರುವುದಿಂದ ಆ ರೀತಿ ಅತ್ಯಾಚಾರವೆಸಗಲಾಗುತ್ತಿದೆ’ ಎಂದು ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದೋರ್ಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಫೂಲ್ ಸಿಂಹ ಅವರು ನೀಡಿದ ಹೇಳಿಕೆಯು ಮುನ್ನೆಲೆಗೆ ಬಂದಿದೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.</p>.<h2>ಮುಖ್ಯಮಂತ್ರಿ ಖಂಡನೆ:</h2><p> ‘ರಾಹುಲ್ ಗಾಂಧಿ ಅವರು ಇಂದೋರ್ಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಕಾಂಗ್ರೆಸ್ ಶಾಸಕರೊಬ್ಬರು ಸಮಾಜದಲ್ಲಿ ದ್ವೇಷ ಹರಡುತ್ತಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತಿಳಿಸಿದ್ದಾರೆ.</p>.<p>‘ಶಾಸಕ ಫೂಲ್ ಸಿಂಹ ಅವರನ್ನು ಪಕ್ಷದಿಂದ ಹೊರಹಾಕುತ್ತಾರೆ ಎಂದು ಭಾವಿಸುತ್ತೇನೆ. ಆಗ ಮಾತ್ರ ಸಮಾಜದಲ್ಲಿರುವ ಎಲ್ಲ ಸಮುದಾಯಗಳ ಬಗ್ಗೆ ಅವರಿಗೆ ಗೌರವವಿದೆ ಎಂದು ನಂಬುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>