<p><strong>ವಾರ್ಧಾ</strong>: ನಗರ ನಕ್ಸಲರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್ ಮುನ್ನಡೆಸುತ್ತಿರುವ ಕಾಂಗ್ರೆಸ್, ಅತ್ಯಂತ ಭ್ರಷ್ಟ ಪಕ್ಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.</p><p>'ಪಿಎಂ ವಿಶ್ವಕರ್ಮ ಯೋಜನೆ' ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಮಾವೇಶನ್ನುದ್ದೇಶಿಸಿ ಮಾತನಾಡಿದ ಮೋದಿ, 'ಇಂದು ನೀವು ನೋಡುತ್ತಿರುವುದು, ಮಹಾತ್ಮ ಗಾಂಧಿಯಂತಹ ಮಹಾನ್ ವ್ಯಕ್ತಿಯನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನಲ್ಲ' ಎಂದಿದ್ದಾರೆ.</p><p>ಮುಂದುವರಿದು, 'ದ್ವೇಷದ ಭೂತ ಆ ಪಕ್ಷವನ್ನು ಹೊಕ್ಕಿದೆ. ಇಂದಿನ ಕಾಂಗ್ರೆಸ್ನಲ್ಲಿ ದೇಶಪ್ರೇಮದ ಆತ್ಮ ಕೊನೆಯುಸಿರೆಳೆದಿದೆ' ಎಂದು ದೂರಿದ್ದಾರೆ.</p><p>ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿನ ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕ ಭೇಟಿ ವೇಳೆ ಮಾತನಾಡಿದ್ದರು. ಆ ಕುರಿತು ಯಾರ ಹೆಸರನ್ನೂ ಉಲ್ಲೇಖಿಸದೆ ಮೋದಿ ಕಿಡಿಕಾರಿದ್ದಾರೆ.</p><p>'ಭ್ರಷ್ಟ ಪಕ್ಷ ಎಂಬುದು ಇದ್ದರೆ ಅದು ಕಾಂಗ್ರೆಸ್ ಮಾತ್ರ' ಎಂದಿರುವ ಪ್ರಧಾನಿ, ಗಾಂಧಿ–ನೆಹರೂ ಕುಟುಂಬದ ಹೆಸರು ಹೇಳದೆ, 'ಅದರ (ಕಾಂಗ್ರೆಸ್ನ) ರಾಯಲ್ ಪರಿವಾರವೇ ಅತ್ಯಂತ ಭ್ರಷ್ಟ ಕುಟುಂಬವಾಗಿದೆ' ಎಂದು ಗುಡುಗಿದ್ದಾರೆ.</p><p>'ಕಾಂಗ್ರೆಸ್, ಗಣಪತಿ ಪೂಜೆಯನ್ನು ವಿರೋಧಿಸುತ್ತದೆ. ನಾನು ಗಣೇಶ ಪೂಜೆಗೆ ಹೋಗಿದ್ದನ್ನೂ ಟೀಕಿಸುತ್ತದೆ. ಇದು ಓಲೈಕೆ ರಾಜಕಾರಣವಾಗಿದೆ. ಗಣಪತಿಯನ್ನು ಕರ್ನಾಟಕದಲ್ಲಿ ಕಂಬಿಯ ಹಿಂದಕ್ಕೆ ನೂಕಲಾಗಿದೆ. ಗಣೇಶ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿ ತೆಗೆದಕೊಂಡು ಹೋಗಲಾಯಿತು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಸಿಜೆಐ ಮನೆಗೆ ಮೋದಿ: ವಿವಾದದ ಕಿಡಿ.<p>'ಗಣಪತಿಗೆ ಆಗಿರುವ ಅವಮಾನದ ಬಗ್ಗೆ ಮಹಾರಾಷ್ಟ್ರದಲ್ಲಿರುವ ಕಾಂಗ್ರೆಸ್ ಮೈತ್ರಿಕೂಟ ಮಾತನಾಡುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, 'ಅವರ (ಕಾಂಗ್ರಸ್ ಮಿತ್ರಪಕ್ಷಗಳ) ಇಬ್ಬಗೆತನದ ಬಗ್ಗೆ ನಾವೆಲ್ಲ ಎಚ್ಚರವಾಗಿರಬೇಕಿದೆ. ಸುಳ್ಳು ಮತ್ತು ದ್ರೋಹ ಕಾಂಗ್ರೆಸ್ನವರ ಗುರುತಾಗಿದೆ. ಆ ಪಕ್ಷದ ಬಗ್ಗೆ ಮಹಾರಾಷ್ಟ್ರದ ಜನರು ಎಚ್ಚೆತ್ತುಕೊಳ್ಳಬೇಕು' ಎಂದು ಕರೆ ನೀಡಿದ್ದಾರೆ.</p><p>ಕಾಂಗ್ರೆಸ್ ಪಕ್ಷವು ರಾಜಕೀಯಕ್ಕೆ ಮತ್ತು ಭ್ರಷ್ಟಾಚಾರಕ್ಕಷ್ಟೇ ರೈತರನ್ನು ಬಳಸಿಕೊಳ್ಳುತ್ತದೆ ಎಂದು ದೂರಿರುವ ಪ್ರಧಾನಿ, ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದೂ ಹೇಳಿದ್ದಾರೆ.</p><p>ಮುಂದುವರಿದು, 'ರೈತರಿಗೆ ದ್ರೋಹ ಬಗೆದ ಕಾಂಗ್ರೆಸ್ಗೆ ಮತ್ತೊಂದು ಅವಕಾಶವನ್ನು ಮಹಾರಾಷ್ಟ್ರದಲ್ಲಿ ನಾವು ನೀಡಬಾರದು' ಎಂದು ಮನವಿ ಮಾಡಿದ್ದಾರೆ.</p><p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರೇ ಹೆಚ್ಚಾಗಿ 'ಪಿಎಂ ವಿಶ್ವಕರ್ಮ ಯೋಜನೆ'ಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಹೇಳಿಕೊಂಡಿರುವ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರವು ವಿಶ್ವಕರ್ಮ ಸುಮದಾಯಗಳನ್ನು ಕಡೆಗಣಿಸಿತ್ತು ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರ್ಧಾ</strong>: ನಗರ ನಕ್ಸಲರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್ ಮುನ್ನಡೆಸುತ್ತಿರುವ ಕಾಂಗ್ರೆಸ್, ಅತ್ಯಂತ ಭ್ರಷ್ಟ ಪಕ್ಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.</p><p>'ಪಿಎಂ ವಿಶ್ವಕರ್ಮ ಯೋಜನೆ' ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಮಾವೇಶನ್ನುದ್ದೇಶಿಸಿ ಮಾತನಾಡಿದ ಮೋದಿ, 'ಇಂದು ನೀವು ನೋಡುತ್ತಿರುವುದು, ಮಹಾತ್ಮ ಗಾಂಧಿಯಂತಹ ಮಹಾನ್ ವ್ಯಕ್ತಿಯನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನಲ್ಲ' ಎಂದಿದ್ದಾರೆ.</p><p>ಮುಂದುವರಿದು, 'ದ್ವೇಷದ ಭೂತ ಆ ಪಕ್ಷವನ್ನು ಹೊಕ್ಕಿದೆ. ಇಂದಿನ ಕಾಂಗ್ರೆಸ್ನಲ್ಲಿ ದೇಶಪ್ರೇಮದ ಆತ್ಮ ಕೊನೆಯುಸಿರೆಳೆದಿದೆ' ಎಂದು ದೂರಿದ್ದಾರೆ.</p><p>ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿನ ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕ ಭೇಟಿ ವೇಳೆ ಮಾತನಾಡಿದ್ದರು. ಆ ಕುರಿತು ಯಾರ ಹೆಸರನ್ನೂ ಉಲ್ಲೇಖಿಸದೆ ಮೋದಿ ಕಿಡಿಕಾರಿದ್ದಾರೆ.</p><p>'ಭ್ರಷ್ಟ ಪಕ್ಷ ಎಂಬುದು ಇದ್ದರೆ ಅದು ಕಾಂಗ್ರೆಸ್ ಮಾತ್ರ' ಎಂದಿರುವ ಪ್ರಧಾನಿ, ಗಾಂಧಿ–ನೆಹರೂ ಕುಟುಂಬದ ಹೆಸರು ಹೇಳದೆ, 'ಅದರ (ಕಾಂಗ್ರೆಸ್ನ) ರಾಯಲ್ ಪರಿವಾರವೇ ಅತ್ಯಂತ ಭ್ರಷ್ಟ ಕುಟುಂಬವಾಗಿದೆ' ಎಂದು ಗುಡುಗಿದ್ದಾರೆ.</p><p>'ಕಾಂಗ್ರೆಸ್, ಗಣಪತಿ ಪೂಜೆಯನ್ನು ವಿರೋಧಿಸುತ್ತದೆ. ನಾನು ಗಣೇಶ ಪೂಜೆಗೆ ಹೋಗಿದ್ದನ್ನೂ ಟೀಕಿಸುತ್ತದೆ. ಇದು ಓಲೈಕೆ ರಾಜಕಾರಣವಾಗಿದೆ. ಗಣಪತಿಯನ್ನು ಕರ್ನಾಟಕದಲ್ಲಿ ಕಂಬಿಯ ಹಿಂದಕ್ಕೆ ನೂಕಲಾಗಿದೆ. ಗಣೇಶ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿ ತೆಗೆದಕೊಂಡು ಹೋಗಲಾಯಿತು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಸಿಜೆಐ ಮನೆಗೆ ಮೋದಿ: ವಿವಾದದ ಕಿಡಿ.<p>'ಗಣಪತಿಗೆ ಆಗಿರುವ ಅವಮಾನದ ಬಗ್ಗೆ ಮಹಾರಾಷ್ಟ್ರದಲ್ಲಿರುವ ಕಾಂಗ್ರೆಸ್ ಮೈತ್ರಿಕೂಟ ಮಾತನಾಡುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, 'ಅವರ (ಕಾಂಗ್ರಸ್ ಮಿತ್ರಪಕ್ಷಗಳ) ಇಬ್ಬಗೆತನದ ಬಗ್ಗೆ ನಾವೆಲ್ಲ ಎಚ್ಚರವಾಗಿರಬೇಕಿದೆ. ಸುಳ್ಳು ಮತ್ತು ದ್ರೋಹ ಕಾಂಗ್ರೆಸ್ನವರ ಗುರುತಾಗಿದೆ. ಆ ಪಕ್ಷದ ಬಗ್ಗೆ ಮಹಾರಾಷ್ಟ್ರದ ಜನರು ಎಚ್ಚೆತ್ತುಕೊಳ್ಳಬೇಕು' ಎಂದು ಕರೆ ನೀಡಿದ್ದಾರೆ.</p><p>ಕಾಂಗ್ರೆಸ್ ಪಕ್ಷವು ರಾಜಕೀಯಕ್ಕೆ ಮತ್ತು ಭ್ರಷ್ಟಾಚಾರಕ್ಕಷ್ಟೇ ರೈತರನ್ನು ಬಳಸಿಕೊಳ್ಳುತ್ತದೆ ಎಂದು ದೂರಿರುವ ಪ್ರಧಾನಿ, ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದೂ ಹೇಳಿದ್ದಾರೆ.</p><p>ಮುಂದುವರಿದು, 'ರೈತರಿಗೆ ದ್ರೋಹ ಬಗೆದ ಕಾಂಗ್ರೆಸ್ಗೆ ಮತ್ತೊಂದು ಅವಕಾಶವನ್ನು ಮಹಾರಾಷ್ಟ್ರದಲ್ಲಿ ನಾವು ನೀಡಬಾರದು' ಎಂದು ಮನವಿ ಮಾಡಿದ್ದಾರೆ.</p><p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರೇ ಹೆಚ್ಚಾಗಿ 'ಪಿಎಂ ವಿಶ್ವಕರ್ಮ ಯೋಜನೆ'ಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಹೇಳಿಕೊಂಡಿರುವ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರವು ವಿಶ್ವಕರ್ಮ ಸುಮದಾಯಗಳನ್ನು ಕಡೆಗಣಿಸಿತ್ತು ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>