<p><strong>ನವದೆಹಲಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲಡಾಖ್ ಪ್ರವಾಸದ ವೇಳೆ ಲೇಹ್ನ ಖರ್ದುಂಗ್ ಲಾಗೆ ಭೇಟಿ ನೀಡಿದ್ದಾರೆ.</p><p>ರಾಹುಲ್ ಗಾಂಧಿ ಅವರು ಭಾನುವಾರ ಲೇಹ್ನ ಪ್ಯಾಂಗಾಂಗ್ ಸರೋವರದ ಬಳಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದರು. ಆಗಸ್ಟ್ 25 ರವರೆಗೆ ರಾಹುಲ್ ಲಡಾಖ್ನಲ್ಲಿ ಇರಲಿದ್ದಾರೆ.</p><p>ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಭಾರತ ಮತ್ತು ಚೀನಾ ನಡುವಿನ ಗಡಿ ವಿಚಾರ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.</p><p>‘ಲಡಾಖ್ನ ಒಂದಿಂಚೂ ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಮೋದಿ ಅವರು ಹೇಳಿರುವುದು ಸತ್ಯಕ್ಕೆ ದೂರವಾದ ಮಾತು’ ಎಂದು ಕಿಡಿಕಾರಿದ್ದರು.</p><p>‘ಚೀನಾ ಸೇನೆ ಲಡಾಖ್ನ ಹುಲ್ಲುಗಾವಲನ್ನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಜನರು ತಲ್ಲಣಗೊಂಡಿದ್ದಾರೆ’ ಎಂದು ತಿಳಿಸಿದ್ದರು.</p><p>‘ಚೀನಾ ಸೇನೆ ಒಳನುಸುಳಿ ತಮ್ಮ ಹುಲ್ಲುಗಾವಲು ವಶಪಡಿಸಿಕೊಂಡಿದೆ. ಅಲ್ಲಿಗೆ ಪ್ರವೇಶಿಸಲು ತಮಗ್ಯಾರಿಗೂ ಅವಕಾಶವಿಲ್ಲ ಎಂದು ಇಲ್ಲಿನ ಜನರು ಸ್ಪಷ್ಟವಾಗಿ ಹೇಳಿದ್ದಾರೆ’ ಎಂದಿದ್ದರು.</p><p>‘ಭಾರತ್ ಜೋಡೊ ಯಾತ್ರೆಯ ವೇಳೆಯೇ ನಾನು ಲಡಾಖ್ಗೆ ಬರಬೇಕಾಗಿತ್ತು. ಆದರೆ, ಕಾರಣಾಂತರಗಳಿಂದ ಇಲ್ಲಿಗೆ ಭೇಟಿ ನೀಡುವ ಯೋಜನೆ ಕೈಬಿಡಬೇಕಾಯಿತು. ಆದ್ದರಿಂದ ಸಂಪೂರ್ಣ ಪ್ರಮಾಣದ ಪ್ರವಾಸ ಕೈಗೊಳ್ಳಲೆಂದು ಈಗ ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ವಿವರಿಸಿದ್ದರು.</p><p>‘ನಾನು ಈಗಾಗಲೇ ಪ್ಯಾಂಗಾಂಗ್ಗೆ ಬಂದಿದ್ದೇನೆ. ನಂತರ, ನುಬ್ರಾ ಮತ್ತು ಕಾರ್ಗಿಲ್ಗೆ ಭೇಟಿ ನೀಡಲಿದ್ದೇನೆ. ಜನರ ಕಷ್ಟಗಳನ್ನು ಆಲಿಸುವುದು ನನ್ನ ಉದ್ದೇಶ’ ಎಂದು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲಡಾಖ್ ಪ್ರವಾಸದ ವೇಳೆ ಲೇಹ್ನ ಖರ್ದುಂಗ್ ಲಾಗೆ ಭೇಟಿ ನೀಡಿದ್ದಾರೆ.</p><p>ರಾಹುಲ್ ಗಾಂಧಿ ಅವರು ಭಾನುವಾರ ಲೇಹ್ನ ಪ್ಯಾಂಗಾಂಗ್ ಸರೋವರದ ಬಳಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದರು. ಆಗಸ್ಟ್ 25 ರವರೆಗೆ ರಾಹುಲ್ ಲಡಾಖ್ನಲ್ಲಿ ಇರಲಿದ್ದಾರೆ.</p><p>ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಭಾರತ ಮತ್ತು ಚೀನಾ ನಡುವಿನ ಗಡಿ ವಿಚಾರ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.</p><p>‘ಲಡಾಖ್ನ ಒಂದಿಂಚೂ ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಮೋದಿ ಅವರು ಹೇಳಿರುವುದು ಸತ್ಯಕ್ಕೆ ದೂರವಾದ ಮಾತು’ ಎಂದು ಕಿಡಿಕಾರಿದ್ದರು.</p><p>‘ಚೀನಾ ಸೇನೆ ಲಡಾಖ್ನ ಹುಲ್ಲುಗಾವಲನ್ನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಜನರು ತಲ್ಲಣಗೊಂಡಿದ್ದಾರೆ’ ಎಂದು ತಿಳಿಸಿದ್ದರು.</p><p>‘ಚೀನಾ ಸೇನೆ ಒಳನುಸುಳಿ ತಮ್ಮ ಹುಲ್ಲುಗಾವಲು ವಶಪಡಿಸಿಕೊಂಡಿದೆ. ಅಲ್ಲಿಗೆ ಪ್ರವೇಶಿಸಲು ತಮಗ್ಯಾರಿಗೂ ಅವಕಾಶವಿಲ್ಲ ಎಂದು ಇಲ್ಲಿನ ಜನರು ಸ್ಪಷ್ಟವಾಗಿ ಹೇಳಿದ್ದಾರೆ’ ಎಂದಿದ್ದರು.</p><p>‘ಭಾರತ್ ಜೋಡೊ ಯಾತ್ರೆಯ ವೇಳೆಯೇ ನಾನು ಲಡಾಖ್ಗೆ ಬರಬೇಕಾಗಿತ್ತು. ಆದರೆ, ಕಾರಣಾಂತರಗಳಿಂದ ಇಲ್ಲಿಗೆ ಭೇಟಿ ನೀಡುವ ಯೋಜನೆ ಕೈಬಿಡಬೇಕಾಯಿತು. ಆದ್ದರಿಂದ ಸಂಪೂರ್ಣ ಪ್ರಮಾಣದ ಪ್ರವಾಸ ಕೈಗೊಳ್ಳಲೆಂದು ಈಗ ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ವಿವರಿಸಿದ್ದರು.</p><p>‘ನಾನು ಈಗಾಗಲೇ ಪ್ಯಾಂಗಾಂಗ್ಗೆ ಬಂದಿದ್ದೇನೆ. ನಂತರ, ನುಬ್ರಾ ಮತ್ತು ಕಾರ್ಗಿಲ್ಗೆ ಭೇಟಿ ನೀಡಲಿದ್ದೇನೆ. ಜನರ ಕಷ್ಟಗಳನ್ನು ಆಲಿಸುವುದು ನನ್ನ ಉದ್ದೇಶ’ ಎಂದು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>