<p><strong>ಅಹಮದಾಬಾದ್</strong>: ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಹಿಂದಿರುಗಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.</p><p>ಇಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಬೆಂಬಲವನ್ನು ಹೊಂದಿದೆ . ಆದರೆ ಬಡ ವರ್ಗಗಳು ಸೇರಿದಂತೆ ಜನಸಂಖ್ಯೆಯ ಸುಮಾರು ಶೇ 50ರಷ್ಟಿರುವ ಇತರೆ ಹಿಂದುಳಿದ ವರ್ಗಗಳ ವಿಶ್ವಾಸವನ್ನು ಮರಳಿ ಗಳಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.</p> .IPL 2021 | CSK vs PBKS: ರಾಹುಲ್ ಅಜೇಯ 98; ಚೆನ್ನೈ ವಿರುದ್ಧ ಪಂಜಾಬ್ಗೆ ಭರ್ಜರಿ ಗೆಲುವು.ಹುಬ್ಬಳ್ಳಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ?: ಸಚಿವ ಎಂ.ಬಿ.ಪಾಟೀಲ. <p>ಜನಸಂಖ್ಯೆಯ ಸುಮಾರು ಅರ್ಧದಷ್ಟು ಪಾಲು ಹೊಂದಿರುವ ಮಹಿಳಾ ಮತದಾರರ ಬೆಂಬಲವನ್ನು ಗಳಿಸುವತ್ತ ಗಮನಹರಿಸಬೇಕೆಂದು ರಾಹುಲ್ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.</p><p>ಈ ವಿಷಯದಲ್ಲಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಸಾಮರ್ಥ್ಯ ಕಾಂಗ್ರೆಸ್ಗೆ ಇದೆ ಎಂದು ರಾಹುಲ್ ಪುನರುಚ್ಚರಿಸಿದ್ದಾರೆ.</p><p>ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯ ಮೇಲಿನ ಶೇ 50 ರಷ್ಟು ಮಿತಿಯನ್ನು ಹೆಚ್ಚಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಸಮಾಜದಲ್ಲಿ ಎಲ್ಲರಿಗೂ ಸಮಾನ ನ್ಯಾಯ ಒದಗಿಸಲು ದೇಶದಾದ್ಯಂತ ಜಾತಿ ಜನಗಣತಿಗೆ ಕಾಂಗ್ರೆಸ್ ಒತ್ತಾಯಿಸಿದೆ.</p>.ಆರ್ಥಿಕತೆಯಲ್ಲಿ ನಿರೀಕ್ಷಿತ ಪ್ರಗತಿ: ವಿತ್ತ ಸಚಿವೆ ನಿರ್ಮಲಾ ವಿಶ್ವಾಸ .IPL ಬೆಟ್ಟಿಂಗ್ ಕುರಿತು ಸ್ಟೇಟಸ್: ‘ರೀಲ್ಸ್ ಸ್ಟಾರ್’ಗಳಿಗೆ ಪೊಲೀಸರ ಎಚ್ಚರಿಕೆ.ಬೆಳಾಲು: ಕಾಡಿನಲ್ಲಿ ಪತ್ತೆಯಾಗಿದ್ದ ಮಗುವಿನ ತಂದೆ-ತಾಯಿ ವಿವಾಹ .ವಕ್ಫ್ ತಿದ್ದುಪಡಿ ಕಾಯ್ದೆ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಹಿಂದಿರುಗಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.</p><p>ಇಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಬೆಂಬಲವನ್ನು ಹೊಂದಿದೆ . ಆದರೆ ಬಡ ವರ್ಗಗಳು ಸೇರಿದಂತೆ ಜನಸಂಖ್ಯೆಯ ಸುಮಾರು ಶೇ 50ರಷ್ಟಿರುವ ಇತರೆ ಹಿಂದುಳಿದ ವರ್ಗಗಳ ವಿಶ್ವಾಸವನ್ನು ಮರಳಿ ಗಳಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.</p> .IPL 2021 | CSK vs PBKS: ರಾಹುಲ್ ಅಜೇಯ 98; ಚೆನ್ನೈ ವಿರುದ್ಧ ಪಂಜಾಬ್ಗೆ ಭರ್ಜರಿ ಗೆಲುವು.ಹುಬ್ಬಳ್ಳಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ?: ಸಚಿವ ಎಂ.ಬಿ.ಪಾಟೀಲ. <p>ಜನಸಂಖ್ಯೆಯ ಸುಮಾರು ಅರ್ಧದಷ್ಟು ಪಾಲು ಹೊಂದಿರುವ ಮಹಿಳಾ ಮತದಾರರ ಬೆಂಬಲವನ್ನು ಗಳಿಸುವತ್ತ ಗಮನಹರಿಸಬೇಕೆಂದು ರಾಹುಲ್ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.</p><p>ಈ ವಿಷಯದಲ್ಲಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಸಾಮರ್ಥ್ಯ ಕಾಂಗ್ರೆಸ್ಗೆ ಇದೆ ಎಂದು ರಾಹುಲ್ ಪುನರುಚ್ಚರಿಸಿದ್ದಾರೆ.</p><p>ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯ ಮೇಲಿನ ಶೇ 50 ರಷ್ಟು ಮಿತಿಯನ್ನು ಹೆಚ್ಚಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಸಮಾಜದಲ್ಲಿ ಎಲ್ಲರಿಗೂ ಸಮಾನ ನ್ಯಾಯ ಒದಗಿಸಲು ದೇಶದಾದ್ಯಂತ ಜಾತಿ ಜನಗಣತಿಗೆ ಕಾಂಗ್ರೆಸ್ ಒತ್ತಾಯಿಸಿದೆ.</p>.ಆರ್ಥಿಕತೆಯಲ್ಲಿ ನಿರೀಕ್ಷಿತ ಪ್ರಗತಿ: ವಿತ್ತ ಸಚಿವೆ ನಿರ್ಮಲಾ ವಿಶ್ವಾಸ .IPL ಬೆಟ್ಟಿಂಗ್ ಕುರಿತು ಸ್ಟೇಟಸ್: ‘ರೀಲ್ಸ್ ಸ್ಟಾರ್’ಗಳಿಗೆ ಪೊಲೀಸರ ಎಚ್ಚರಿಕೆ.ಬೆಳಾಲು: ಕಾಡಿನಲ್ಲಿ ಪತ್ತೆಯಾಗಿದ್ದ ಮಗುವಿನ ತಂದೆ-ತಾಯಿ ವಿವಾಹ .ವಕ್ಫ್ ತಿದ್ದುಪಡಿ ಕಾಯ್ದೆ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>