‘1990ರಲ್ಲಿ ವಿ.ಪಿ ಸಿಂಗ್ ಕೇಂದ್ರ ಸರ್ಕಾರದ ಅವಧಿಯಲ್ಲಿ ಅಂಬೇಡ್ಕರ್ ಅವರಿಗೆ ‘ಭಾರತ ರತ್ನ‘ ನೀಡಿ ಗೌರವಿಸಿತ್ತು. ಆಗ ಬಿಜೆಪಿ ಕೂಡ ಬೆಂಬಲಿಸಿತ್ತು. ಆದರೆ ಕಾಂಗ್ರೆಸ್ ಅವರನ್ನು( ಅಂಬೇಡ್ಕರ್) ಪ್ರತಿ ಹಂತದಲ್ಲೂ ಅವಮಾನನಿಸಿದೆ’ ಎಂದು ಜೋಶಿ ಹೇಳಿದ್ದಾರೆ.
‘ಇಂಡಿಯಾ’ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ಪ್ರಧಾನಿ ಅಭ್ಯರ್ಥಿ ಯಾರೆಂದು ಆಯ್ಕೆ ಮಾಡದೇ, ಕೇವಲ ಒಂದು ವರ್ಗವನ್ನು ಓಲೈಸಲು ಹಾಗೂ ರಕ್ಷಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದಿದ್ದಾರೆ.