ರಾಮ ದೇವರ ಕುರಿತು ಕಾಂಗ್ರೆಸ್ಗೆ ಏಕೆ ಸಮಸ್ಯೆ ಎಂದು ಅವರು ಪ್ರಶ್ನಿಸಿದರು. ರಾಮ ಹುಟ್ಟಲೇ ಇಲ್ಲ, ಅದೊಂದು ಕಾಲ್ಪನಿಕ ಪಾತ್ರ ಎಂದು ಹೇಳಿತ್ತು. ಅಲ್ಲದೆ, ಸನಾತನ ಧರ್ಮವನ್ನು ಡೆಂಗಿ, ಮಲೇರಿಯಾ ಹಾಗೂ ಏಡ್ಸ್ಗೆ ಹೋಲಿಸಿದೆ ಎಂದು ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನು ದೇಶ ಮತ್ತು ಪ್ರಪಂಚದ ಲಕ್ಷಾಂತರ ಜನರ ನಂಬಿಕೆಯ ಸಂಕೇತವಾಗಿದೆ. ಈ ಕಾರ್ಯಕ್ರಮವನ್ನು ವಿರೋಧಿಸುತ್ತಿರುವುದು ಕಾಂಗ್ರೆಸ್ನ ತುಷ್ಟೀಕರಣ ನೀತಿಗೆ ಕಾರಣವಾಗಿದೆ ಎಂಬುದನ್ನು ತೋರಿಸುತ್ತದೆ’ ಎಂದು ತಿಳಿಸಿದರು.
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ನಿರಾಕರಿಸಿದ್ದು, ಇದನ್ನು ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ಆರೋಪಿಸಿದೆ.