<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆ ಎದುರಾಗಿರುವ ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ.</p>.<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರ ಬಿಟ್ಟು ನಂದಿಗ್ರಾಮ ಕ್ಷೇತ್ರದಿಂದ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಸೋತಿದ್ದರು. ಆದರೂ, ಟಿಎಂಸಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಮೇ 5ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 6 ತಿಂಗಳ ಒಳಗಾಗಿ(ನವೆಂಬರ್ 5ರ ಒಳಗೆ) ಅವರು ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಹೀಗಾಗಿ ಮಮತಾ ಅವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಲುವಾಗಿ ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್ದೇವ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಹೀಗಾಗಿ ಭವಾನಿಪುರದಲ್ಲಿ ಉಪಚುನಾವಣೆ ಎದುರಾಗಿದೆ. </p>.<p>ಈ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಇಲ್ಲವೋ ಎಂಬುದರ ಬಗ್ಗೆ ಚರ್ಚೆಗಳು ನಡೆದಿದ್ದವು. ಈ ಮಧ್ಯೆ ಸ್ಪಷ್ಟೀಕರಣ ನೀಡಿರುವ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, ‘ಮುಂಬರುವ ಭವಾನಿಪುರ ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ತೀರ್ಮಾನಿಸಲಾಗಿದೆ,‘ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>ಅಭ್ಯರ್ಥಿಯನ್ನು ಹಾಕಲು ಈ ಮೊದಲು ಎಐಸಿಸಿ ನಿರ್ಧರಿಸಿತ್ತು.</p>.<p>ಸೆ. 30ರಂದು ಉಪಚುನಾವಣೆ ನಡೆಯಲಿದೆ.ಅಕ್ಟೋಬರ್ 3ರಂದು ಮತ ಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆ ಎದುರಾಗಿರುವ ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ.</p>.<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರ ಬಿಟ್ಟು ನಂದಿಗ್ರಾಮ ಕ್ಷೇತ್ರದಿಂದ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಸೋತಿದ್ದರು. ಆದರೂ, ಟಿಎಂಸಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಮೇ 5ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 6 ತಿಂಗಳ ಒಳಗಾಗಿ(ನವೆಂಬರ್ 5ರ ಒಳಗೆ) ಅವರು ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಹೀಗಾಗಿ ಮಮತಾ ಅವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಲುವಾಗಿ ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್ದೇವ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಹೀಗಾಗಿ ಭವಾನಿಪುರದಲ್ಲಿ ಉಪಚುನಾವಣೆ ಎದುರಾಗಿದೆ. </p>.<p>ಈ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಇಲ್ಲವೋ ಎಂಬುದರ ಬಗ್ಗೆ ಚರ್ಚೆಗಳು ನಡೆದಿದ್ದವು. ಈ ಮಧ್ಯೆ ಸ್ಪಷ್ಟೀಕರಣ ನೀಡಿರುವ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, ‘ಮುಂಬರುವ ಭವಾನಿಪುರ ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ತೀರ್ಮಾನಿಸಲಾಗಿದೆ,‘ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>ಅಭ್ಯರ್ಥಿಯನ್ನು ಹಾಕಲು ಈ ಮೊದಲು ಎಐಸಿಸಿ ನಿರ್ಧರಿಸಿತ್ತು.</p>.<p>ಸೆ. 30ರಂದು ಉಪಚುನಾವಣೆ ನಡೆಯಲಿದೆ.ಅಕ್ಟೋಬರ್ 3ರಂದು ಮತ ಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>