ಈ ಕುರಿತು ಸೋಮವಾರ ಸಂಸತ್ನಲ್ಲಿ ಮಾತನಾಡಿರುವ ಕೇರಳದ ಕಾಂಗ್ರೆಸ್ ಸಂಸದ ಟಿ.ಎನ್. ಪ್ರತಾಪನ್, ನಾವು ನಮ್ಮ ಭಾರತವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದೇವೆ ಎಂದು ಪ್ರಶ್ನಿಸಿದರು.
‘ಈ ದೇಶದ ವೈವಿಧ್ಯತೆಯನ್ನು ಕಳೆದುಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ. ವಿದ್ಯಾರ್ಥಿಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕಿದೆ. ಶಿಕ್ಷಣ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಪ್ರತಾಪನ್ ಒತ್ತಾಯಿಸಿದರು.