ಚಳಿಗಾಲದ ಅಧಿವೇಶನ ಆರಂಭವಾಗಿ ಇಷ್ಟು ದಿನಗಳಾದರೂ, ರಾಜ್ಯ ಸರ್ಕಾರವು ಈವರೆಗೆ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿಲ್ಲ. ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು, ರೈತರಿಗೆ ಸಾಕಷ್ಟು ಪರಿಹಾರ ನೀಡಲಾಗಿದೆ ಎಂದು ಕೇವಲ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ರೈತರು ಭಾರಿ ಪ್ರಮಾಣದ ನಷ್ಟಕ್ಕೆ ಒಳಗಾಗಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ.