‘2015–16ರ ಬಜೆಟ್ನಲ್ಲಿ ಮದುರೈನಲ್ಲಿ ಏಮ್ಸ್ ಸ್ಥಾಪನೆ ಮಾಡುವುದಾಗಿ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಯೋಜನೆ ಪ್ರಕಟಿಸಿ ನಾಲ್ಕು ವರ್ಷವಾದರೂ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. 2019ರ ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಅವರು ಏಮ್ಸ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಇದಾಗಿ ಈಗ ಐದು ವರ್ಷವಾದರೂ, ಕಾಮಗಾರಿಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಇದೀಗ ಚುನಾವಣೆಗಳು ಎದುರಾಗಿದ್ದರಿಂದಾಗಿ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಗೆ ಕಾಮಗಾರಿ ಆರಂಭವಾಗಿದೆ‘ ಎಂದು ವ್ಯಂಗ್ಯವಾಡಿದ್ದಾರೆ.